ರಾಜ್ಯಪಾಲರನ್ನು ದಿಢೀರ್ ಭೇಟಿ ಮಾಡಿದ ಮುಖ್ಯಮಂತ್ರಿ ಯಡಿಯೂರಪ್ಪ!

Update: 2020-07-31 11:37 GMT

ಬೆಂಗಳೂರು, ಜು.31: ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು  ಶುಕ್ರವಾರ ಭೇಟಿ ಮಾಡಿ ಮಾತುಕತೆ ನಡೆಸಿರುವುದು ಚರ್ಚೆಗೆ ಗ್ರಾಸವಾಗಿದೆ.

ವಿಧಾನ‌ ಪರಿಷತ್ತಿಗೆ ನೂತನ‌ ಸದಸ್ಯರ ಆಯ್ಕೆ, ಸಚಿವ ಸಂಪುಟ ಪುನಾರಚನೆ ಆಗಸ್ಟ್‌ನಲ್ಲಿ ನಡೆಯುವ ಸಾಧ್ಯತೆ ಇರುವುದರಿಂದ ಮುಖ್ಯಮಂತ್ರಿಯವರ ಈ ಭೇಟಿ ಮಹತ್ವ ಪಡೆದಿದೆ ಎನ್ನಲಾಗಿದೆ.

ಈ‌ ಕುರಿತು ರಾಜ್ಯಪಾಲರ ಭೇಟಿ ಬಳಿಕ    ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆದಿಲ್ಲ. ಸ್ವಾತಂತ್ರ್ಯ ದಿನೋತ್ಸವ ಸಿದ್ಧತೆಗಳು, ಕೋವಿಡ್‌ ನಿರ್ವಹಣೆ ಕುರಿತು ರಾಜ್ಯಪಾಲರಿಗೆ ಮಾಹಿತಿ ನೀಡಲಾಗಿದೆ ಎಂದು ನುಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News