ಭಾರೀ ಮಳೆ ಸಾಧ್ಯತೆ: ಉಡುಪಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್

Update: 2020-08-01 07:27 GMT

ಉಡುಪಿ, ಆ.1: ಉಡುಪಿ ಜಿಲ್ಲೆಯಲ್ಲಿ ಮುಂದಿನ ಐದು ದಿನಗಳ ಕಾಲ ಭಾರೀ ಮಳೆ ಸುರಿಯುವ ಸಾಧ್ಯತೆಯ ಕುರಿತಂತೆ ಭಾರತೀಯ ಹವಾಮಾನ ಇಲಾಖೆ, ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಮುನ್ಸೂಚನೆ ನೀಡಿರುವುದರಿಂದ ಜಿಲ್ಲೆಯಲ್ಲಿ ‘ಆರೆಂಜ್ ಅಲರ್ಟ್’ನ್ನು ಘೋಷಿಸಲಾಗಿದೆ.

ಈ ಅವಧಿಯಲ್ಲಿ ಸುಮಾರು 115 ಮಿ.ಮೀ.ಗಿಂತ ಅಧಿಕ ಮಳೆಯಾಗುವ ಸಾಧ್ಯತೆ ಇರುವುದರಿಂದ, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾದಿಕಾರ ಮುಂಜಾಗ್ರತಾ ಕ್ರಮವಾಗಿ ಈ ಕೆಳಗಿನ ಸೂಚನೆಗಳನ್ನು ಸಾರ್ವಜನಿಕರಿಗೆ ನೀಡಿದೆ.

ಮುಂದಿನ ಐದು ದಿನಗಳ ಕಾಲ ಸಾರ್ವಜನಿಕರು ನದಿ, ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸಬೇಕು. ಮಕ್ಕಳು, ಸಾರ್ವಜನಿಕರು ಅಪಾಯಕಾರಿ ವಿದ್ಯುತ್ ಕಂಬ, ಕಟ್ಟಡ, ಮರಗಳ ಕೆಳಗೆ ನಿಲ್ಲದೆ ಸುರಕ್ಷಿತ ಸ್ಥಳಗಳಲ್ಲಿ ನಿಲ್ಲಬೇಕು. ತುರ್ತು ಸಂದರ್ಭದಲ್ಲಿ ದೂರವಾಣಿ ಸಂಖ್ಯೆ: 0820-2574802 ಸಂಪರ್ಕಿಸುವಂತೆ ಜಿಲ್ಲಾದಿಕಾರಿ ಜಿ.ಜಗದೀಶ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News