ದ.ಕ. ಜಿಲ್ಲೆ : ಕೋವಿಡ್‌ಗೆ ಆರು ಬಲಿ; ಹೊಸದಾಗಿ 139 ಮಂದಿಗೆ ಸೋಂಕು

Update: 2020-08-01 14:36 GMT

ಮಂಗಳೂರು, ಆ.1: ದ.ಕ. ಜಿಲ್ಲೆಯಲ್ಲಿ ಕೊರೋನ ಸೋಂಕಿನಿಂದ ಮತ್ತೆ ಆರು ಮಂದಿ ಮೃತಪಟ್ಟಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಮೃತಪಟ್ಟವರ ಸಂಖ್ಯೆ 159ಕ್ಕೆ ಏರಿಕೆಯಾಗಿದೆ. ಈ ನಡುವೆ ಶನಿವಾರ 139 ಮಂದಿಗೆ ಸೋಂಕು ತಗುಲಿದೆ.

ಮಂಗಳೂರು ತಾಲೂಕಿನಲ್ಲೇ ಸೋಂಕಿತರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಮಂಗಳೂರು-91, ಬಂಟ್ವಾಳ-19, ಬೆಳ್ತಂಗಡಿ-14, ಪುತ್ತೂರು-9, ಹೊರಜಿಲ್ಲೆಯ ಆರು ಮಂದಿಯಲ್ಲಿ ಕೊರೋನ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 5,852ಕ್ಕೆ ಏರಿದೆ. ಸೋಂಕಿತರನ್ನು ಜಿಲ್ಲೆಯ ವಿವಿಧ ಆಸ್ಪತ್ರೆಯಲ್ಲಿ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ತಿಳಿಸಿದ್ದಾರೆ.

54 ಮಂದಿ ಗುಣಮುಖ

ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 54 ಮಂದಿ ಕೊರೋನ ಮುಕ್ತರಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ 2,685 ಮಂದಿ ಕೊರೋನ ಸೋಂಕಿನಿಂದ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಜಿಲ್ಲೆಯಲ್ಲಿ 3008 ಸಕ್ರಿಯ ಪ್ರಕರಣಗಳಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News