ಮಂಡ್ಯ: ಅಪ್ರಾಪ್ತೆಯ ಅತ್ಯಾಚಾರ ಆರೋಪಿಯನ್ನು ಥಳಿಸಿ ಕೊಂದ ಗ್ರಾಮಸ್ಥರು

Update: 2020-08-01 17:55 GMT

ಮಂಡ್ಯ, ಆ.1: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾನೆಂದು ಆರೋಪಿಸಿ ವ್ಯಕ್ತಿಯೋರ್ವನನ್ನು ಗ್ರಾಮಸ್ಥರೇ ಥಳಿಸಿ ಹತ್ಯೆಗೈದಿರುವ ಘಟನೆ ತಾಲೂಕಿನ ಎಸ್.ಐ.ಕೋಡಿಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

ಗ್ರಾಮದ ನಿವಾಸಿ ಭೈರ (31) ಹತ್ಯೆಯಾದ ವ್ಯಕ್ತಿ. ಸುಮಾರು 8 ವರ್ಷದ ಬಾಲಕಿ ಮೇಲೆ ಆರೋಪಿ ಅತ್ಯಾಚಾರ ನಡೆಸಿದ್ದಾನೆ ಎನ್ನಲಾಗಿದೆ. ಈ ವಿಚಾರ ತಿಳಿಯುತ್ತಿದ್ದಂತೆ ಅಪ್ರಾಪ್ತೆಯ ಸಂಬಂಧಿಕರು ಸೇರಿದಂತೆ ಗ್ರಾಮಸ್ಥರು ಹಿಡಿದು ಥಳಿಸಿದ್ದಾರೆ. ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ಭೈರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಎನ್ನಲಾಗಿದೆ.

ಸಂತ್ರಸ್ತೆ ಬಾಲಕಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಕೆರಗೋಡು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News