ಮೈಸೂರು : ಕೊರೋನ ವಾರಿಯರ್ ಖಲೀಲ್ ಉಲ್ ರಹ್ಮಾನ್ ನಿಧನ

Update: 2020-08-02 09:20 GMT

ಮೈಸೂರು : ವಾರ್ತಾ ಮತ್ತು ಸಾರ್ವಜನಿಕ ಇಲಾಖೆ ರಚಿಸಿದ್ದ ಸ್ವಯಂ ಸೇವಕರ ತಂಡದಲ್ಲಿ ಕೆಲಸ ಮಾಡುತಿದ್ದ ಖಲೀಲ್ ಉಲ್ ರಹ್ಮಾನ್ (30) ಅನಾರೋಗ್ಯದಿಂದ ನಿಧನರಾಗಿದ್ದಾರೆ. 

ಕೊರೋನ ಲಾಕ್ ಡೌನ್ ಸಂದರ್ಭದಲ್ಲಿ ಬಡವರಿಗೆ ಸಹಾಯ ಮಾಡುತಿದ್ದ ಇವರು 25 ಸಾವಿರಕ್ಕೂ ಹೆಚ್ಚು ಬಡವರಿಗೆ ಪಡಿತರ ಕಿಟ್ ವಿತರಿಸಿದ್ದು, 500ಕ್ಕೂ ಹೆಚ್ಚು ನಿರ್ಗತಿಕರಿಗೆ ದೇಣಿಗೆ ಸಂಗ್ರಹಿಸಿ ಆಹಾರ ವಿತರಣೆ ಮಾಡಿದ್ದರು.

ಇವರ ಸೇವೆಯನ್ನು ಗುರುತಿಸಿದ ಇಂಡಿಯನ್ ರೆಡ್ ಕ್ರಾಸ್ ಹಾಗೂ ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಅತ್ಯುತ್ತಮ ಸ್ವಯಂ ಸೇವಕ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ಕಳೆದ 8 ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಇವರಿಗೆ ಕೊರೋನ ಪರೀಕ್ಷೆ ಮಾಡಿಸಿದ್ದು, ನೆಗೆಟಿವ್ ವರದಿ ಬಂದಿರುವುದಾಗಿ ತಿಳಿದುಬಂದಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News