ಖಾಸಗಿ ಆಸ್ಪತ್ರೆಗಳ ನಿರ್ಲಕ್ಷ್ಯದಿಂದ ಮಹಿಳೆ ಸಾವು: ಎಸ್.ಡಿ.ಪಿ.ಐ ಆರೋಪ

Update: 2020-08-02 15:01 GMT

ಮೈಸೂರು,ಆ.2: ಖಾಸಗಿ ಆಸ್ಪತ್ರೆಗಳ ನಿರ್ಲಕ್ಷ್ಯದಿಂದ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಎಸ್.ಡಿ.ಪಿ.ಐ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಮಜೀದ್ ಆರೋಪಿಸಿದ್ದಾರೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉದ್ಯೋಗಿ ಛೋಟಿ ಬಿ (52) ಮೃತಪಟ್ಟ ಮಹಿಳೆ. ಅನಾರೋಗಕ್ಕೆ ಈಡಾದ ಇವರನ್ನು ಶನಿವಾರ ನಗರದ ಕಾವೇರಿ, ಅಪೋಲೋ, ನಾರಾಯಣ ಹೃದಯಾಲಯ ಸೇರಿದಂತೆ ಹಲವು ಆಸ್ಪತ್ರೆಗೆಳಿಗೆ ಚಿಕಿತ್ಸೆಗೆಂದು ಕರೆದುಕೊಂಡು ಸುತ್ತಲಾಯಿತು. ಆದರೆ ಯಾವುದೇ ಆಸ್ಪತ್ರೆಯವರು ರೋಗಿಯನ್ನು ದಾಖಲು ಮಾಡಿಕೊಳ್ಳಲಿಲ್ಲ. ಕಡೆಗೆ ಮೈಸೂರು ಬೆಂಗಳೂರು ರಸ್ತೆಯಲ್ಲಿರುವ ಬಿಬಿ ಆಯಿಷಾ ಆಸ್ಪತ್ರೆಗೆ ಕರೆದುಕೊಂಡು ಬರಲಾಯಿತಾದರೂ ಅಷ್ಟರಲ್ಲಿ ಅವರು ಸಾವನ್ನಪ್ಪಿದ್ದಾರೆ.  ಸಾವಿಗೆ ಖಾಸಗಿ ಆಸ್ಪತ್ರೆಗಳ ನಿರ್ಲಕ್ಷ್ಯವೇ ಕಾರಣವಾಗಿದ್ದು, ಇವರ ನಿರ್ಲಕ್ಷ್ಯಗೆ ದಿನೇ ದಿನೇ ಸಾವಿನ ಸಂಖ್ಯೆ ಹೆಚ್ಚುತ್ತಲೇ ಇದೆ ಎಂದು ಅಬ್ದುಲ್ ಮಜೀದ್ ಆರೋಪಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News