ಶಾಸಕ ನಾಗನಗೌಡ ಕಂದಕೂರ ಅವರಿಗೆ ಕೊರೋನ ಸೋಂಕು ದೃಢ

Update: 2020-08-03 14:50 GMT

ಯಾದಗಿರಿ, ಆ.3 : ಜಿಲ್ಲೆಯ ಗುರುಮಠಕಲ್ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕ ನಾಗನಗೌಡ ಕಂದಕೂರ ಅವರಿಗೆ ಕೋವಿಡ್-19 ದೃಢಪಟ್ಟಿದೆ.

ಈ ಕುರಿತು ಶಾಸಕರ ಪುತ್ರ ಶರಣಗೌಡ ಕಂದಕೂರ ತಮ್ಮ ಫೇಸ್‍ಬುಕ್ ಪುಟದಲ್ಲಿ ಬರೆದುಕೊಂಡಿದ್ದಾರೆ. ನಮ್ಮ ತಂದೆ ಶಾಸಕ ನಾಗನಗೌಡ ಕಂದಕೂರ ಮತ್ತು ಸಹೋದರ ಮಲ್ಲಿಕಾರ್ಜುನರೆಡ್ಡಿ ಅವರಿಗೆ ಪರೀಕ್ಷೆ ಮಾಡಿಸಿದಾಗ ಕೋವಿಡ್ ದೃಢಪಟ್ಟಿದೆ. ರೋಗ ಲಕ್ಷಣ ಇಲ್ಲದಿದ್ದರೂ ಆರೋಗ್ಯದ ಹಿತದೃಷ್ಟಿಯಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದುದರಿಂದ ಶಾಸಕರ ಸಂಪರ್ಕಕ್ಕೆ ಬಂದ ಎಲ್ಲರೂ ಹೋಂ ಕ್ವಾರಂಟೈನ್‍ಗೆ ಒಳಗಾಗಬೇಕು ಮತ್ತು ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಶೀಘ್ರದಲ್ಲಿ ನಿಮ್ಮೆಲ್ಲರ ಆಶೀರ್ವಾದದಿಂದ ಗುಣಮುಖರಾಗಿ ಜನಸೇವೆಗೆ ಬರಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News