ಅಮಿತ್ ಶಾ ಕುರಿತು ಅವಹೇಳಕನಾರಿ ಟ್ವೀಟ್ ಆರೋಪ: ಕಾಂಗ್ರೆಸ್ ಮುಖಂಡನ ಬಂಧನ

Update: 2020-08-03 15:09 GMT

ಬೆಂಗಳೂರು, ಆ.3: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಬಗ್ಗೆ ಅವಹೇಳನಕಾರಿಯಾಗಿ ಟ್ವೀಟ್ ಮಾಡಿದ ಆರೋಪದ ಮೇಲೆ ಕೆಪಿಸಿಸಿ ಸಾಮಾಜಿಕ ಜಾಲತಾಣಗಳ ಕಾರ್ಯದರ್ಶಿ ಆನಂದ್ ಪ್ರಸಾದ್ ಎಂಬುವರನ್ನು ಕಬ್ಬನ್ ಪಾರ್ಕ್ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಬಗ್ಗೆ ಟ್ವೀಟ್ ಮಾಡಿದ್ದ ಆನಂದ್ ಪ್ರಸಾದ್ ಅವರ ವಿರುದ್ಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದರನ್ವಯ ಕಾರ್ಯಾಚರಣೆ ನಡೆಸಿದ ಪೊಲೀಸರು ನಗರದ ಕೆ.ಆರ್.ಪುರನಲ್ಲಿರುವ ನಿವಾಸದಲ್ಲೇ ರವಿವಾರ ರಾತ್ರಿ ಆನಂದ್ ಪ್ರಸಾದ್ ಅವರನ್ನು ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News