ಉಡುಪಿ: ಆ.5ಕ್ಕೆ ಭೂಮಿ ಪೂಜನಾ ಕಾರ್ಯಕ್ರಮ

Update: 2020-08-03 16:05 GMT

ಉಡುಪಿ, ಆ.3: ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ನಿರ್ಮಾಣಕ್ಕಾಗಿ ಭೂಮಿ ಪೂಜನಾ ಶಿಲಾನ್ಯಾಸ ಕಾರ್ಯಕ್ರಮ ಆ.5ರಂದು ಅಯೋಧ್ಯೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಉಪಸ್ಥಿತಿಯಲ್ಲಿ ನಡೆಯಲಿದೆ.

ಈ ಐತಿಹಾಸಿಕ ಸಂದರ್ಭದಲ್ಲಿ ಜಿಲ್ಲೆಯ ಸಮಸ್ತ ಕಾರ್ಯಕರ್ತರ ಮನೆಗಳಲ್ಲಿ ಭಗವಾಧ್ವಜವನ್ನು ಹಾರಿಸಿ, ನಂದಾ ದೀಪವನ್ನು ಬೆಳಗಿಸಿ, ಶ್ರೀರಾಮ ರಕ್ಷಾ ಸ್ತೋತ್ರವನ್ನು ಜಪಿಸಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News