ಸ್ವಯಂ ಐಸೋಲೇಶನ್‌ಗೆ ಒಳಗಾದ ಸಚಿವ ರವಿಶಂಕರ್ ಪ್ರಸಾದ್

Update: 2020-08-03 17:25 GMT

ಹೊಸದಿಲ್ಲಿ, ಆ.4: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಶನಿವಾರ ಸಂಜೆ ಭೇಟಿಯಾಗಿರುವ ಹಿನ್ನೆಲೆಯಲ್ಲಿ ಐಟಿ ಹಾಗೂ ಟೆಲಿಕಾಂ ಸಚಿವ ರವಿ ಶಂಕರ್ ಪ್ರಸಾದ್ ಅವರು ಸ್ವಯಂ ಐಸೋಲೇಶನ್‌ಗೆ ಒಳಗಾಗಿದ್ದಾರೆ.

 ರವಿಶಂಕರ್ ಪ್ರಸಾದ್ ಅವರಿಗೆ ಕೊರೋನದ ಯಾವುದೇ ಲಕ್ಷಣಗಳು ಇಲ್ಲ. ಆದರೂ ಪ್ರಸ್ತುತ ಅಸ್ತಿತ್ವದಲ್ಲಿರುವ ಶಿಷ್ಟಾಚಾರಕ್ಕೆ ಅನುಗುಣವಾಗಿ ಅವರು ಐಸೋಲೇಶನ್‌ಗೆ ಒಳಗಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ತಾನು ಕೊರೋನ ಸೋಂಕಿಗೆ ಒಳಗಾಗಿರುವುದಾಗಿ ಹಾಗೂ ವೈದ್ಯರ ಸಲಹೆಯ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿರುವುದಾಗಿ ಕೇಂದ್ರ ಸಚಿವ ಅಮಿತ್ ಶಾ ರವಿವಾರ ಹೇಳಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News