ಕೊರೋನ ಸೋಂಕಿತ ವಿಚಾರಣಾಧೀನ ಕೈದಿ ಕೋವಿಡ್ ಆಸ್ಪತ್ರೆಯಿಂದ ಪರಾರಿ
Update: 2020-08-03 18:08 GMT
ಮೈಸೂರು,ಆ.3: ಕೊರೋನ ಸೋಂಕಿತ ವಿಚಾರಣಾಧೀನ ಕೈದಿಯೊಬ್ಬ ಕೋವಿಡ್ ಆಸ್ಪತ್ರೆಯಿಂದ ಪರಾರಿಯಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಸುಮಾರು 21 ವರ್ಷದ ವ್ಯಕ್ತಿಯೊಬ್ಬ ಪ್ರಕರಣವೊಂದರ ವಿಚಾರಣೆಯನ್ನು ಎದುರಿಸುತ್ತಿದ್ದು, ಈತನನ್ನು ನಗರದ ಕೇಂದ್ರ ಕಾರಾಗೃಹದಲ್ಲಿ ಇಡಲಾಗಿತ್ತು. ಈತನಿಗೆ ಕೊರೋನ ಸೋಂಕು ದೃಢಪಟ್ಟ ಹಿನ್ನಲೆಯಲ್ಲಿ ಕಳೆದ ನಾಲ್ಕು ದಿನಗಳ ಹಿಂದೆ ಮೇಟಗಳ್ಳಿಯಲ್ಲಿರುವ ನೂತನ ಕೋವಿಡ್-19 ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿತ್ತು.
ಆತ ರವಿವಾರ ಬೆಳಗಿನ ಜಾವ ಆಸ್ಪತ್ರೆಯಿಂದ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ಈ ಸಂಬಂಧ ನೂತನ ಕೋವಿಡ್-19 ಆಸ್ಪತ್ರೆ ಸ್ಥಾನಿಕ ವೈದ್ಯಾಧಿಕಾರಿ ಮೇಟಗಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.