ಆ.4ರ ಜೆಡಿಎಸ್ ಪೂರ್ವಭಾವಿ ಸಭೆ ಮುಂದೂಡಿಕೆ

Update: 2020-08-03 19:03 GMT

ಬೆಂಗಳೂರು, ಆ.3: ಮಹಾಮಾರಿ ಕೊರೋನ ವೈರಸ್ ರಾಜ್ಯದಲ್ಲಿ ಮತ್ತು ದೇಶದಲ್ಲಿ ಭೀಕರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಎಲ್ಲರ ಆರೋಗ್ಯದ ಹಿತದೃಷ್ಟಿಯಿಂದ ಸಾಮೂಹಿಕವಾಗಿ ಸೇರುವುದು ಬೇಡ ಎಂದು ತೀರ್ಮಾನಿಸಿ, ರಾಜ್ಯ ಸರಕಾರದ ಜನ ವಿರೋಧಿ ಕಾಯ್ದೆ ತಿದ್ದುಪಡಿಗಳ ಬಗ್ಗೆ ಪ್ರತಿಭಟಿಸಲು ಆ.4ರಂದು ಜೆ.ಪಿ.ಭವನದಲ್ಲಿ ಕರೆದಿದ್ದ ಜೆಡಿಎಸ್ ಪಕ್ಷದ ಶಾಸಕರು, ಸೋತ ಅಭ್ಯರ್ಥಿಗಳು ಹಾಗೂ ಜಿಲ್ಲಾ ಅಧ್ಯಕ್ಷರ ಪೂರ್ವಭಾವಿ ಸಭೆಯನ್ನು ಮುಂದೂಡಲಾಗಿದೆ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News