ಮುಹಮ್ಮದ್ ಇಸ್ಮಾಯೀಲ್

Update: 2020-08-04 06:54 GMT

ಮಂಗಳೂರು, ಆ.4: ಮೂಲತಃ ಬಂದರ್ ಕಸೈಗಲ್ಲಿಯ ಸದ್ಯ ತೊಕ್ಕೊಟ್ಟು ಸಮೀಪದ ಕುತ್ತಾರ್-ಸಂತೋಷ ನಗರದ ನಿವಾಸಿ ಮುಹಮ್ಮದ್ ಇಸ್ಮಾಯೀಲ್ (54) ಮಂಗಳವಾರ ಮುಂಜಾವ ನಗರದ ಸರಕಾರಿ ಆಸ್ಪತ್ರೆಯಲ್ಲಿ ನಿಧನರಾದರು.

ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿದ್ದ ಇವರು ಸಮಾಜಸೇವೆಯಲ್ಲೂ ಮುಂಚೂಣಿಯಲ್ಲಿದ್ದರು. ಕೆಲವು ದಿನಗಳ ಹಿಂದೆ ಅಸೌಖ್ಯಕ್ಕೀಡಾಗಿದ್ದ ಇವರನ್ನು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಬಳಿಕ ನಗರದ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಮೃತರು ಇಬ್ಬರು ಪತ್ನಿಯರು ಮತ್ತು ಇಬ್ಬರು ಪುತ್ರರು ಹಾಗೂ ಇಬ್ಬರು ಪುತ್ರಿಯರ ಸಹಿತ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ