ಹೋರಾಟಗಾರ ವಾಟಾಳ್ ನಾಗರಾಜ್ ಅವರ ಪತ್ನಿ ನಿಧನ

Update: 2020-08-04 16:48 GMT

ಬೆಂಗಳೂರು, ಆ.4: ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರ ಪತ್ನಿ ಜ್ಞಾನಾಂಬಿಕೆ (60) ಮಂಗಳವಾರ ನಿಧನ ಹೊಂದಿದ್ದಾರೆ. 

ಕಿಡ್ನಿ ವೈಫಲ್ಯದಿಂದ ಅವರು ಮಂಗಳವಾರ ಸಂಜೆ 7:30ಕ್ಕೆ ಶೇಷಾದ್ರಿ ಪುರಂನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಮೃತರ ಪಾರ್ಥಿವ ಶರೀರವನ್ನು ವಾಟಾಳ್ ನಾಗರಾಜ್ ರವರ ಸ್ವಗೃಹ ಡಾಲರ್ಸ್ ಕಾಲನಿಯ ನಿವಾಸಕ್ಕೆ ಕೊಂಡೊಯ್ಯಲಾಗುವುದು. ಬುಧವಾರ ಬೆಳಗ್ಗೆ 9 ಗಂಟೆಗೆ ಬೆಂಗಳೂರಿನಿಂದ ಹೊರಟು ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಸ್ವಗ್ರಾಮದಲ್ಲಿ ವಿಧಿ ವಿಧಾನ ನೆರವೇರಿಸಿ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಅವರ ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News