ಮಾರಕಾಸ್ತ್ರಗಳಿಂದ ದಾಳಿ ನಡೆಸಿ ರೌಡಿಯ ಹತ್ಯೆ

Update: 2020-08-04 16:56 GMT

ಬೆಂಗಳೂರು, ಆ.4: ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ರೌಡಿಯೋರ್ವನನ್ನು ಹತ್ಯೆಗೈದಿರುವ ಘಟನೆ ಇಲ್ಲಿನ ಮೈಕೊ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬಿಟಿಎಂ ಲೇಔಟ್ ಎರಡನೆ ಹಂತದ ಎನ್‍ಎಸ್ ಪಾಳ್ಯದ ನಿವಾಸಿ ಮಣಿ(27) ಎಂಬಾತ ಕೊಲೆಯಾಗಿರುವ ರೌಡಿ ಎಂದು ತಿಳಿದುಬಂದಿದೆ.

ರೌಡಿಶೀಟರ್ ಆಗಿದ್ದ ಮಣಿ, ಆಟೊ ಚಾಲಕನಾಗಿ ಕೆಲಸ ಮಾಡುತ್ತಿದ್ದು, ಸೋಮವಾರ ತಡ ರಾತ್ರಿ ಮನೆಯ ಬಳಿ ಬಂದ ದುಷ್ಕರ್ಮಿಗಳ ತಂಡ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆಗೈದು ಪರಾರಿಯಾಗಿದ್ದಾರೆ.

ಘಟನೆ ಸಂಬಂಧ ಮೈಕೊ ಲೇಔಟ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಶಂಕೆ ಮೇರೆಗೆ ಕೆಲವು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News