ಸಹಕಾರ ಸಂಘ, ಬ್ಯಾಂಕ್‍ಗಳಿಗೆ ಆಡಳಿತಾಧಿಕಾರಿ ನೇಮಕ: ಸರಕಾರದ ಆದೇಶಕ್ಕೆ ಹೈಕೋರ್ಟ್ ತಡೆ

Update: 2020-08-04 17:09 GMT

ಬೆಂಗಳೂರು, ಆ.4: ಕೊರೋನ ವೈರಸ್ ಸೋಂಕು ದಿನಂಪ್ರತಿ ಹೆಚ್ಚಾಗುತ್ತಿರುವ ಹಿನ್ನೆಲೆ ರಾಜ್ಯದ ಎಲ್ಲ ಸಹಕಾರ ಸಂಘಗಳು ಮತ್ತು ಬ್ಯಾಂಕ್‍ಗಳ ಚುನಾವಣೆ ಮುಂದೂಡಿ ಅವುಗಳಿಗೆ ಆಡಳಿತಾಧಿಕಾರಿ ನೇಮಕ ಮಾಡಲು ಸರಕಾರ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ.

ಸರಕಾರದ ಆದೇಶ ರದ್ದು ಕೋರಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಸಗಟು ಮಾರಾಟ ಸಹಕಾರ ಸಂಘದ ಅಧ್ಯಕ್ಷ ಉದಯ ಮಾದೋರಿ ಸೇರಿ ಮೂವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಈ ಆದೇಶ ನೀಡಿದೆ.

ಅರ್ಜಿಯಲ್ಲಿ ಪ್ರತಿವಾದಿಗಳಾದ ರಾಜ್ಯ ಸಹಕಾರ ಇಲಾಖೆಯ ಕಾರ್ಯದರ್ಶಿ, ಸಹಕಾರ ಸಂಘಗಳ ನಿಬಂಧಕರು, ಮೈಸೂರು ಪ್ರಾಂತ ಸಹಕಾರ ಸಂಘಗಳ ಜಂಟಿ ನಿಬಂಧಕರು ಮತ್ತು ರಾಜ್ಯ ಸಹಕಾರ ಸಂಘಗಳ ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ ಮಾಡಿ, ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ನ್ಯಾಯಪೀಠವು ನಿರ್ದೇಶಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News