ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿಯಾದ ಕಾರು: ಇಬ್ಬರು ಸಾವು, ಮತ್ತೋರ್ವನಿಗೆ ಗಾಯ
Update: 2020-08-04 17:14 GMT
ಮೈಸೂರು,ಆ.4: ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಮೈಸೂರಿನ ವಿದ್ಯಾರಣ್ಯಪುರಂ ನಿವಾಸಿ ಹೇಮಂತ್ (22) ಕಾರಿನಲ್ಲಿ ಹೆಚ್.ಡಿ. ಕೋಟೆಯಿಂದ ಮೈಸೂರಿಗೆ ವಾಪಸಾಗುವಾಗ ಜಯಪುರ ಬಳಿಯ ಹಾರೋಹಳ್ಳಿಯ ಬೆಳ್ಳಿಕೊಳಗ ಎಸ್ಟೇಟ್ ಬಳಿ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಅಪ್ಪಳಿಸಿದೆ. ಘಟನೆಯಲ್ಲಿ ಹೇಮಂತ್ ಹಾಗೂ ಆತನ ಜೊತೆಗಿದ್ದ ಯುವತಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮತ್ತೊಬ್ಬ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಈ ಸಂಬಂಧ ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.