ಪ.ಬಂಗಾಳದಲ್ಲಿ ಬೆಂಕಿ ಅವಘಡ, ನೂರಕ್ಕೂ ಅಧಿಕ ಅಂಗಡಿಗಳು ಭಸ್ಮ

Update: 2020-08-04 18:11 GMT

ಬರೂಯಿಪುರ, ಆ.4: ಪ.ಬಂಗಾಳದ ದಕ್ಷಿಣ 24 ಪರಗಣಗಳ ಜಿಲ್ಲೆಯ ಬರೂಯಿಪುರದ ಕಚರಿ ಬಾಝಾರ್‌ನಲ್ಲಿ ಮಂಗಳವಾರ ಬೆಳಗಿನ ಜಾವ ಸಂಭವಿಸಿದ ಭಾರೀ ಅಗ್ನಿ ದುರಂತದಲ್ಲಿ ನೂರಕ್ಕೂ ಅಧಿಕ ಅಂಗಡಿಗಳು ಸುಟ್ಟು ಭಸ್ಮಗೊಂಡಿದ್ದು,ಕೋಟ್ಯಂತರ ರೂ.ಗಳ ನಷ್ಟ ಸಂಭವಿಸಿದೆ.

ನಸುಕಿನ ಎರಡು ಗಂಟೆಯ ಸುಮಾರಿಗೆ ಮಾರುಕಟ್ಟೆಯಲ್ಲಿನ ಬಟ್ಟೆಗಳ ಗೋದಾಮಿನಲ್ಲಿ ಕಾಣಿಸಿಕೊಂಡಿದ್ದ ಬೆಂಕಿಯ ಜ್ವಾಲೆಗಳು ಕೆಲವೇ ನಿಮಿಷಗಳಲ್ಲಿ ಇಡೀ ಮಾರುಕಟ್ಟೆಯನ್ನು ಆವರಿಸಿಕೊಂಡಿದ್ದವು ಎಂದು ಸ್ಥಳೀಯರು ತಿಳಿಸಿದರು.

13 ಅಗ್ನಿಶಾಮಕ ಯಂತ್ರಗಳು ಸ್ಥಳಕ್ಕೆ ಧಾವಿಸಿದ್ದು,ಬೆಳಿಗ್ಗೆ ಏಳು ಗಂಟೆಯ ಸುಮಾರಿಗೆ ಬೆಂಕಿಯನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾಗಿವೆ.

ಅಗ್ನಿಶಾಮಿಕ ಯಂತ್ರಗಳು ತಡವಾಗಿ ಸ್ಥಳಕ್ಕೆ ಆಗಮಿದ್ದು,ಬೆಂಕಿ ಹರಡಲು ಕಾರಣವಾಯಿತು ಎಂದು ಅಂಗಡಿಕಾರರು ದೂರಿದ್ದಾರೆ.

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಬೆಂಕಿ ಅವಘಡಕ್ಕೆ ಕಾರಣವಾಗಿತ್ತು ಎನ್ನುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News