ಭಾರೀ ಮಳೆ ಸಾದ್ಯತೆ: ಶಿವಮೊಗ್ಗ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ
Update: 2020-08-05 14:03 GMT
ಶಿವಮೊಗ್ಗ: ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮುಂದಿನ ಕೆಲವು ಗಂಟೆಗಳಲ್ಲಿ ಅಧಿಕ ಮಳೆ ಬೀಳುವ ಹಿನ್ನಲೆಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ ಕೆಲವು ಗಂಟೆಗಳಲ್ಲಿ ವ್ಯಾಪಕವಾಗಿ ಮಳೆ ಬೀಳುವ ಮುನ್ನೆಚ್ಚರಿಕೆಯನ್ನ ಹವಾಮಾನ ಇಲಾಖೆ ನೀಡಿರುವ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್ ರೆಡ್ ಅಲರ್ಟ್ ಘೋಷಿಸಿದ್ದಾರೆ.
ಅದರಂತೆ ಶಿವಮೊಗ್ಗ ಜಿಲ್ಲೆಯಲ್ಲಿ ನದಿ, ಕೆರೆ ದಂಡೆಯಲ್ಲಿರುವವರು ಜಾಗರೂಕರಾಗಿರಬೇಕು. ಯಾವುದೇ ಕಾರಣಕ್ಕೂ ನದಿ ಅಥವಾ ಕೆರೆಗಳ ಸಮೀಪ ತೆರಳಬಾರದು. ಅತಿವೃಷ್ಟಿ ಪರಿಸ್ಥಿತಿಯನ್ನು ಎದುರಿಸಲು ಜಿಲ್ಲಾಡಳಿತ ಎಲ್ಲಾ ಕ್ರಮಗಳನ್ನು ಕೈಗೊಂಡಿದೆ. ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರಸ್ಥಾನದಲ್ಲಿರಲು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಸೂಚನೆ ನೀಡಿದ್ದಾರೆ.