ಬೆಂಗಳೂರು: ಅಬಕಾರಿ ಸಚಿವರ ಕಚೇರಿ ಸೀಲ್‍ಡೌನ್

Update: 2020-08-05 16:09 GMT

ಬೆಂಗಳೂರು, ಆ.5: ಇಲ್ಲಿನ ವಿಕಾಸೌಧದಲ್ಲಿರುವ ಅಬಕಾರಿ ಸಚಿವ ಎಚ್.ನಾಗೇಶ್ ಕಚೇರಿಯ ಮೂವರು ಸಿಬ್ಬಂದಿಗೆ ಕೊರೋನ ಸೋಂಕು ದೃಢಪಟ್ಟಿರುವ ಹಿನ್ನೆಲೆ ತಾತ್ಕಾಲಿಕವಾಗಿ ಸೀಲ್ ಡೌನ್ ಮಾಡಲಾಗಿದೆ.

ಸಚಿವ ಎಚ್.ನಾಗೇಶ್ ಅವರ ಇಬ್ಬರು ಭದ್ರತಾ ಸಿಬ್ಬಂದಿ ಹಾಗೂ ಓರ್ವ ಆಪ್ತ ಸಹಾಯಕನಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದೆ. ಎಚ್. ನಾಗೇಶ್ ಅವರನ್ನೂ ಕೂಡ ತಪಾಸಣೆಗೆ ಒಳಪಡಿಸಲಾಗಿದ್ದು ಅವರ ವರದಿ ನೆಗೆಟಿವ್ ಬಂದಿದ್ದು, ಅವರು ಹೋಂ ಕ್ವಾರಂಟೈನ್ ಆಗಿದ್ದಾರೆ ಎಂದು ತಿಳಿದುಬಂದಿದೆ.

ವಿಕಾಸ ಸೌಧದ 3ನೆ ಮಹಡಿಯಲ್ಲಿರುವ ಅಬಕಾರಿ ಸಚಿವರ ಕೊಠಡಿ ಸುತ್ತಲೂ ಸ್ಯಾನಿಟೈಸ್ ಮಾಡಿ ಸೀಲ್ ಡೌನ್ ಮಾಡಲಾಗಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News