ಕ್ರೈಸ್ತ ಸನ್ಯಾಸಿನಿ ಅತ್ಯಾಚಾರ ಪ್ರಕರಣ: ಬಿಷಪ್ ಫ್ರಾಂಕೊ ಮುಳಕ್ಕಲ್ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

Update: 2020-08-05 18:09 GMT

ಹೊಸದಿಲ್ಲಿ, ಆ. 4: ತನ್ನ ವಿರುದ್ಧದ ಅತ್ಯಾಚಾರ ಪ್ರಕರಣವನ್ನು ಕೈಬಿಡುವಂತೆ ಆಗ್ರಹಿಸಿ ಕ್ರೈಸ್ತ ಸನ್ಯಾಸಿನಿ ಅತ್ಯಾಚಾರ ಪ್ರಕರಣದ ಆರೋಪಿ ಬಿಷಪ್ ಫ್ರಾಂಕೊ ಮುಳಕ್ಕಲ್ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಬುಧವಾರ ತಿರಸ್ಕರಿಸಿದೆ.

'ನಿಮ್ಮ ಅರ್ಜಿ ಪರಿಗಣನೆಗೆ ಯೋಗ್ಯವಾಗಿಲ್ಲ'' ಎಂದು ಮುಳಕ್ಕಲ್ ಅವರ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೊಬ್ಡೆ ಹೇಳಿದ್ದಾರೆ. ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ಅರ್ಜಿಯಲ್ಲಿ ಮುಳಕ್ಕಲ್, ತನ್ನನ್ನು ಪ್ರಕರಣದಲ್ಲಿ ಸಿಲುಕಿಸಲಾಗಿದೆ ಎಂದು ಹೇಳಿದ್ದಾರೆ. ಅಲ್ಲದೆ, ಕ್ರೈಸ್ತ ಸನ್ಯಾಸಿನಿಯ ಆರ್ಥಿಕ ವ್ಯವಹಾರವನ್ನು ಪ್ರಶ್ನಿಸಿದ್ದಾರೆ.

ತಾನು ಅಮಾಯಕ. ಆದುದರಿಂದ ಪ್ರಕರಣದಿಂದ ಬಿಡುಗಡೆಗೊಳಿಸುವಂತೆ ಮುಳಕ್ಕಲ್ ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.

ಪ್ರಕರಣದಿಂದ ಬಿಡುಗಡೆಗೊಳಿಸುವಂತೆ ಕೋರಿ ಮುಳಕ್ಕಲ್ ಸಲ್ಲಿಸಿದ ಅರ್ಜಿಯನ್ನು ಈ ಹಿಂದೆ ವಿಚಾರಣಾ ನ್ಯಾಯಾಲಯ ಹಾಗೂ ಕೇರಳ ಉಚ್ಚ ನ್ಯಾಯಾಲಯ ತಿರಸ್ಕರಿಸಿತ್ತು ಹಾಗೂ ವಿಚಾರಣೆಗೆ ಹಾಜರಾಗುವಂತೆ ನಿರ್ದೇಶನ ನೀಡಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News