ಅಡುಗೆ ಅನಿಲ ಸಿಲಿಂಡರ್ ಸ್ಫೋಟ: ನಾಲ್ವರಿಗೆ ಗಂಭೀರ ಗಾಯ

Update: 2020-08-06 05:51 GMT

ವಿಜಯಪುರ, ಆ.6: ಗೃಹಿಣಿಯೋರ್ವ ಅಡುಗೆ ಮಾಡುವ ಸಂದರ್ಭದಲ್ಲಿ ಏಕಾಏಕಿ ಗ್ಯಾಸ್ ಸಿಲಿಂಡರ್ ಆಗಿ ನಾಲ್ವರಿಗೆ ಗಂಭೀರ ಗಾಯಗಳಾದ ಘಟನೆ ವಿಜಯಪುರ ಜಿಲ್ಲೆಯ ಕೋಲ್ಹಾರಪಟ್ಟಣದಲ್ಲಿ ರಾತ್ರಿ ವೇಳೆ ನಡೆದಿದೆ.

ಕೋಲ್ಹಾರ ನಿವಾಸಿಯಾದ ಮುದಕಪ್ಪಬೆಳ್ಳುಬ್ಬಿ ಎಂಬವರ ಮನೆಯಲ್ಲಿ ಈ ಅವಘಡ ಸಂಭವಿಸಿದೆ. ಅಡುಗೆ ಮಾಡುವ ಸಂದರ್ಭ ಆಕಸ್ಮಿಕವಾಗಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದೆ ಎನ್ನಲಾಗಿದೆ. ಗಾಯಗೊಂಡವರನ್ನು ರಕ್ಷಿಸಿ ಬಾಗಲಕೋಟೆ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಸ್ಫೋಟದಿಂದ ಮನೆ ಹಾಗೂ ಪಕ್ಕದ ಮನೆಯವರ ಗೋಡೆಗಳು ಸಹ ಬಿರುಕು ಬಿಟ್ಟಿವೆ. ಈ ಕುರಿತು ಕೋಲ್ಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News