ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶ: ರೈತ ಮೃತ್ಯು

Update: 2020-08-06 07:29 GMT

ಚಿಕ್ಕಮಗಳೂರು, ಆ.6: ಭಾರೀ ಗಾಳಿಮಳೆಯಿಂದಾಗಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಆಕಸ್ಮಿಕವಾಗಿ ತುಳಿದ ಪರಿಣಾಮ ವಿದ್ಯುತ್ ಆಘಾತಕ್ಕೊಳಗಾಗಿ ರೈತನೋರ್ವ ಮೃತಪಟ್ಟ ಘಟನೆ ಕಳೆದ ರಾತ್ರಿ ಕಡೂರಿನಲ್ಲಿ ನಡೆದಿದೆ. ಇದರೊಂದಿಗೆ ಈ ಸಲದ ಮಳೆಗೆ ಜಿಲ್ಲೆಯಲ್ಲಿ ಮೊದಲ ಜೀವ ಬಲಿಯಾಗಿದೆ.

ಮೃತರನ್ನು ಕಡೂರು ತಾಲೂಕಿನ ಜಕ್ಕನಹಳ್ಳಿ ಗ್ರಾಮದ ನಿವಾಸಿ ಪರಮೇಶ್ವರಪ್ಪ(38) ಎಂದು ಗುರುತಿಸಲಾಗಿದೆ. ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯಲ್ಲಿ ವಿದ್ಯುತ್ ಪ್ರವಹಿಸುತ್ತಿದ್ದು, ಇದನ್ನು ಗಮನಿಸದೆ ತೋಟಕ್ಕೆ ತೆರಳಿ ಹಿಂದಿರುಗುತ್ತಿದ್ದ ವೇಳೆ ಪರಮೇಶ್ವರಪ್ಪ ಆಕಸ್ಮಿಕವಾಗಿ ತುಳಿದಿದ್ದಾರೆನ್ನಲಾಗಿದೆ.

ಈ ಬಗ್ಗೆ ಯಗಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News