ಮಳೆಯಿಂದ ಆಗಬಹುದಾದ ಹಾನಿ ಬಗ್ಗೆ ಸರಕಾರ ಎಚ್ಚೆತ್ತುಕೊಳ್ಳಬೇಕು: ಈಶ್ವರ್ ಖಂಡ್ರೆ

Update: 2020-08-06 13:10 GMT

ಬೆಂಗಳೂರು, ಆ.6: ಕೊರೋನ ಸಂಕಷ್ಟದ ನಡುವೆ ರಾಜ್ಯದಲ್ಲಿ ಮಳೆ ಆರ್ಭಟ ಹೆಚ್ಚಾಗುತ್ತಿದೆ. ಸರಕಾರ ಮಳೆ ಹಾನಿ ಸಂಭವಿಸಿದ ಬಳಿಕ ಕ್ರಮ ಕೈಗೊಳ್ಳುವ ಬದಲು ಈಗಲೇ ಎಚ್ಚೆತ್ತುಕೊಳ್ಳಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಟ್ವೀಟ್ ಮಾಡಿದ್ದಾರೆ.

ಕಲ್ಯಾಣ ಕರ್ನಾಟಕದ ಭಾಗಗಳಲ್ಲಿ ಕೃಷ್ಣಾ ನದಿಯ ಪ್ರವಾಹ ಕಾರಣ ಕೆಲ ಗ್ರಾಮಗಳು ಜಲಾವೃತವಾಗುವ ಆತಂಕ ಇದ್ದು, ಸರಕಾರ ಹಾಗೂ ಜಿಲ್ಲಾಡಳಿತ ಕೂಡಲೆ ಗ್ರಾಮಸ್ಥರ ಸ್ಥಳಾಂತರ ಮಾಡಲಿ. ಮಳೆ ಎದುರಿಸಲು ಸನ್ನದ್ಧು ಪಡೆಯನ್ನು ಕೂಡಲೆ ರಚಿಸಿ, ವಿಪತ್ತು ನಿರ್ವಹಣಾ ತಂಡವನ್ನ ಮಳೆ ಪೀಡಿತ ಪ್ರದೇಶಗಳಿಗೆ ರವಾನಿಸಲು ಸೂಚನೆ ನೀಡುವಂತೆ ಅವರು ಆಗ್ರಹಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News