ಜಯದೇವ ಆಸ್ಪತ್ರೆಯಲ್ಲಿ ದಾಂಧಲೆ ಆರೋಪ: ಇಬ್ಬರ ಬಂಧನ

Update: 2020-08-06 13:20 GMT

ಬೆಂಗಳೂರು, ಆ.6: ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಹಿನ್ನೆಲೆ ಜಯದೇವ ಆಸ್ಪತ್ರೆಯ ಗಾಜು ಒಡೆದು ದಾಂಧಲೆ ನಡೆಸಿದ್ದ ಆರೋಪದಡಿ ಇಬ್ಬರನ್ನು ಇಲ್ಲಿನ ತಿಲಕ್ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಡಿ.ಜಿ ಹಳ್ಳಿ ಮೂಲದ ನಿವಾಸಿ ವಸೀಂ ಹಾಗೂ ಖಾಸೀರ್ ಎಂಬುವರು ಬಂಧಿತ ಆರೋಪಿಗಳೆಂದು ಪೊಲೀಸರು ತಿಳಿಸಿದ್ದಾರೆ.

ಅನ್ಸರ್ ಪಾಷಾ ಎಂಬುವವರಿಗೆ ಎದೆ ನೋವು ಕಾಣಿಸಿಕೊಂಡ ಕಾರಣ ರವಿವಾರ ಸಂಜೆ ಜಯದೇವ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದರು. ಆದರೆ, ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದರು. ಈ ವೇಳೆ ಸಂಬಂಧಿಕರಾದ ವಸೀಂ ಹಾಗೂ ಖಾಸೀರ್ ಆಸ್ಪತ್ರೆಯಲ್ಲಿ  ರೋಗಿಗಳಿಗೆ ತೊಂದರೆ ಮಾಡಿ ಕೊಠಡಿಯ ಬಾಗಿಲಿಗೆ ಅಳವಡಿಸಿದ್ದ ಗಾಜು ಪುಡಿ ಪುಡಿ ಮಾಡಿದ್ದರು ಎಂದು ಆರೋಪಿಸಲಾಗಿದೆ.

ಈ ಘಟನೆಗೆ ಸಂಬಂಧಿಸಿದಂತೆ ಆಸ್ಪತ್ರೆಯವರು ದೂರು ದಾಖಲಿಸಿದ್ದರಿಂದ ಪೊಲೀಸರು ಆರೋಪಿಗಳನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News