ಉದ್ಯಾವರ ಪಡುಕೆರೆಯಲ್ಲಿ ತೀವ್ರಗೊಂಡ ಕಡಲ್ಕೊರೆತ : ಡಿಸಿಯಿಂದ ಪರಿಶೀಲನೆ

Update: 2020-08-06 15:32 GMT

ಉಡುಪಿ, ಆ.6: ಉದ್ಯಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಉದ್ಯಾವರ ಪಡುಕರೆಯಲ್ಲಿ ಕಡಲು ಪ್ರಕ್ಷುಬ್ದಗೊಂಡಿದ್ದು, ಬೃಹತ್ ಗಾತ್ರದ ಅಲೆಗಳು ತೀರದ ರಸ್ತೆಗೆ ಬಡಿಯುತ್ತಿವೆ. ಇದರಿಂದ ಮರಳು ರಸ್ತೆ ಮೇಲೆ ಬಿದ್ದ ಪರಿಣಾಮ ಇಲ್ಲಿ ವಾಹನ ಸಂಚಾರಕ್ಕೆ ಅಡ್ಡಿ ಉಂಟಾಗಿದೆ.

ಈ ಸಂಬಂಧ ಇಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಹಾಗೂ ಜಿಪಂ ಅಧ್ಯಕ್ಷ ದಿನಕರ ಬಾಬು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಉಡುಪಿ ತಹಶೀಲ್ದಾರ್ ಪ್ರದೀಪ್ ಕುರ್ಡೇಕರ್, ಕಂದಾಯ ಅಧಿಕಾರಿ ವಿಶ್ವನಾಥ್, ರವಿ ಪಡುಕರೆ, ಕೃಷ್ಣ, ರಂಜನ್ ಪಡುಕರೆ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News