ಮೈಸೂರು: ಗೋಡೆ ಕುಸಿದು ವೃದ್ಧ ಸಾವು

Update: 2020-08-06 16:42 GMT

ಮೈಸೂರು,ಆ.6: ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದ  ಹೆಚ್.ಡಿ.ಕೋಟೆ ತಾಲೂಕಿನಲ್ಲಿ ಇಂದು ಎರಡನೇ ಬಲಿಯಾಗಿದೆ. 
ನಿನ್ನೆಯಷ್ಟೇ ಮರ ಉರುಳಿಬಿದ್ದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿದ್ದರು .ಇಂದು  ಮನೆಗೋಡೆ ಕುಸಿದು ವೃದ್ದರೊಬ್ಬರು ಸಾವನ್ನಪ್ಪಿದ್ದಾರೆ.

ಮೃತರನ್ನು ಮಾದಾಪುರ ಗ್ರಾಮದ ನಿವಾಸಿ ಶಿವನಂಜಯ್ಯ (80) ಎಂದು ಗುರುತಿಸಲಾಗಿದ್ದು,  ಕುಸಿದ ಗೋಡೆಯ ಕೆಳಗೆ ಸಿಲುಕಿ ಮೃತಪಟ್ಟಿದ್ದಾರೆ. ಎರಡು ಮೂರು ದಿನದಿಂದ ಸುರಿಯುತ್ತಿರುವ ಮಳೆಯಿಂದ ಗೋಡೆ ಕುಸಿದಿದೆ. ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲೂಕಿನ ಮಾದಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News