ತುರ್ತು ಕ್ರಮಗಳಿಗೆ ನನ್ನ ಒಪ್ಪಿಗೆಗೆ ಕಾಯದೆ ಕ್ರಮ ವಹಿಸಿ: ಸಿಎಸ್‍ಗೆ ಸಿಎಂ ಯಡಿಯೂರಪ್ಪ ಸೂಚನೆ

Update: 2020-08-07 13:17 GMT

ಬೆಂಗಳೂರು, ಆ. 7: ರಾಜ್ಯದಲ್ಲಿನ ಮಳೆ ಮತ್ತು ಪ್ರವಾಹ ಪರಿಸ್ಥಿತಿಯ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪನವರು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ್ ಭಾಸ್ಕರ್ ಅವರಿಗೆ ಕರೆ ಮಾಡಿ ಮಾಹಿತಿ ಪಡೆದುಕೊಂಡಿದ್ದು, ಅಗತ್ಯ ತುರ್ತು ಕ್ರಮಗಳಿಗೆ ನನ್ನ ಒಪ್ಪಿಗೆಗೆ ಕಾಯದೆ ಮುಂದುವರಿಯಲು ಸೂಚನೆ ನೀಡಿದ್ದಾರೆ.

ಕೊರೋನ ಸೋಂಕಿನ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುಖ್ಯಮಂತ್ರಿ ಯಡಿಯೂರಪ್ಪನವರು ಪ್ರವಾಹ ಪರಿಸ್ಥಿತಿ ಹಿನ್ನೆಲೆಯಲ್ಲಿ ತುರ್ತು ಕ್ರಮಗಳನ್ನು ಕೊಳ್ಳಬೇಕು. ಅತಿವೃಷ್ಟಿ ಪರಿಸ್ಥಿತಿ ಎದುರಾಗಿರುವ ಕೊಡಗಿನ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರಿಂದ ಮಾಹಿತಿ ಪಡೆದರು. ತಲಕಾವೇರಿಯಲ್ಲಿ ಗುಡ್ಡ ಕುಸಿತದಿಂದ ನಾಪತ್ತೆಯಾಗಿರುವ ಅರ್ಚಕರ ಕುಟುಂಬದ ಬಗ್ಗೆಯೂ ಸಿಎಂ ಇದೇ ವೇಳೆ ಮಾಹಿತಿ ಪಡೆದುಕೊಂಡಿದ್ದಾರೆಂದು ಟ್ವಿಟರ್ ಮೂಲಕ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News