ಡಾ.ಯೂಸುಫ್ ನಿಧನಕ್ಕೆ ದ.ಕ. ಜಿಲ್ಲಾ ವಕ್ಫ್ ಸಲಹಾ ಸಮಿತಿ ತೀವ್ರ ಸಂತಾಪ

Update: 2020-08-07 14:09 GMT

ಮಂಗಳೂರು : ಕರ್ನಾಟಕ ರಾಜ್ಯ ವಕ್ಫ್ ಬೋರ್ಡ್ ಅಧ್ಯಕ್ಷ, ಮುಸ್ಲಿಂ ಸಮುದಾಯದ ಹಿರಿಯ ನಾಯಕರಾಗಿದ್ದ ಡಾ. ಮುಹಮ್ಮದ್ ಯೂಸುಫ್ ಸಾಹೇಬ್ ಅವರ ನಿಧನಕ್ಕೆ ದ.ಕ. ಜಿಲ್ಲಾ ವಕ್ಫ್ ಸಲಹಾ ಸಮಿತಿ ತೀವ್ರ ಸಂತಾಪ ವ್ಯಕ್ತಪಡಿಸಿದೆ.

ಈ ಬಗ್ಗೆ ಹೇಳಿಕೆ ನೀಡಿರುವ ದ.ಕ. ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷರಾದ ಕಣಚೂರು ಮೋನು ಹಾಜಿ, ಯೂಸುಫ್ ಹಾಜಿ ಅವರು ಮುಸ್ಲಿಂ ಸಮುದಾಯಕ್ಕೆ ನೀಡಿದಂತಹ ಕೊಡುಗೆಯನ್ನು ಮರೆಯಲು ಸಾಧ್ಯವಿಲ್ಲ. ವಕ್ಫ್ ನ ಅಭಿವೃದ್ಧಿಗಾಗಿ ಸಾಕಷ್ಟು ದುಡಿದಿದ್ದಾರೆ. ಅವರ ಅಗಲುವಿಕೆಯು ಸಮಾಜಕ್ಕೆ ಹಾಗೂ ಸಮುದಾಯಕ್ಕೆ  ತುಂಬಲಾರದ ನಷ್ಟವಾಗಿದೆ. ಅವರ ಕುಟುಂಬಕ್ಕೆ ದುಃಖವನ್ನು ಸಹಿಸುವ ಶಕ್ತಿಯನ್ನು ದೇವನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News