ಬಾವಿಗೆ ಬಿದ್ದು ದಿನಸಿ ವ್ಯಾಪಾರಿ ಮೃತ್ಯು

Update: 2020-08-07 15:31 GMT

ಅಜೆಕಾರು, ಆ.7: ತೋಟದಲ್ಲಿ ಅಡಿಕೆ ಹಾಗೂ ತೆಂಗಿನಕಾಯಿ ಹೆಕ್ಕುತ್ತಿದ್ದ ವ್ಯಕ್ತಿಯೊಬ್ಬರು ಅಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಆ.7ರಂದು ಬೆಳಗ್ಗೆ 7.30ರ ಸುಮಾರಿಗೆ ಅಂಡಾರು ರಾಮ ಮಂದಿರ ಸಮೀಪ ನಡೆದಿದೆ.

ಮೃತರನ್ನು ಅಂಡಾರಿನ ಜಗದೀಶ್ ಪೈ(48) ಎಂದು ಗುರುತಿಸಲಾಗಿದೆ. ಇವರು ಜಿನಸಿ ಅಂಗಡಿ ವ್ಯಾಪಾರ ಮಾಡಿಕೊಂಡಿದ್ದು, ಮನೆ ಸಮೀಪದ ತಮ್ಮ ತೋಟದಲ್ಲಿ ಅಡಿಕೆ ಹಾಗೂ ತೆಂಗಿನಕಾಯಿ ಹೆಕ್ಕಲು ಹೋಗಿದ್ದರು. ಈ ವೇಳೆ ಅವರು ಆಕಸ್ಮಿಕವಾಗಿ ಕಾಲು ಜಾರಿ ಅಲ್ಲೇ ಇದ್ದ ಬಾವಿಗೆ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆನ್ನಲಾಗಿದೆ. ಈ ಬಗ್ಗೆ ಅಜೆಕಾರು ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News