8 ಐಪಿಎಸ್ ಅಧಿಕಾರಿಗಳ ವರ್ಗಾವಣೆ

Update: 2020-08-07 16:03 GMT

ಬೆಂಗಳೂರು, ಆ.7: ರಾಜ್ಯ ಪೊಲೀಸ್ ಇಲಾಖೆಯ ಐಪಿಎಸ್ ಅಧಿಕಾರಿಗಳ ವರ್ಗಾವಣೆ ಪ್ರಕ್ರಿಯೆ ಮುಂದುವರೆದಿದ್ದು, ಬೆಂಗಳೂರು ಉತ್ತರ ಸಂಚಾರ ವಿಭಾಗದ ಡಿಸಿಪಿ ಸಾರಾ ಫಾತಿಮಾ ಸೇರಿದಂತೆ 8 ಐಪಿಎಸ್ ಅಧಿಕಾರಿಗಳನ್ನು ಶುಕ್ರವಾರ ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಿಡಿಸಿದೆ.

ಮಂಗಳೂರಿನ ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ಆಗಿದ್ದ ಲಕ್ಷ್ಮೀ ಗಣೇಶ್ ಅವರನ್ನು ಬೆಂ.ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸ್ಥಾನಕ್ಕೆ ವರ್ಗಾಯಿಸಲಾಗಿದೆ. ಅದೇ ರೀತಿ, ವಿ.ಜೆ.ಸಜೀತ್ ಅವರನ್ನು ಬೆಂಗಳೂರು ಉತ್ತರ ಸಂಚಾರ ವಿಭಾಗದ ಡಿಸಿಪಿ ಆಗಿ, ಸಾರಾ ಫಾತಿಮಾ ಅವರನ್ನು ಸಿಐಡಿ ಎಸ್ಪಿ, ಯಶೋಧಾ ವಂಟಗೋಡಿ ಅವರನ್ನು ಕರ್ನಾಟಕ ಲೋಕಾಯುಕ್ತ ಎಸ್ಪಿ, ಜಯಪ್ರಕಾಶ್ ಅವರನ್ನು ಎಸಿಪಿ ಎಸ್ಪಿ ಆಗಿ ವರ್ಗಾವಣೆ ಮಾಡಲಾಗಿದೆ. 

ಅದೇ ರೀತಿ, ಶ್ರೀಕಾಂತ ಕಟ್ಟೀಮನಿ ಅವರನ್ನು ಕಲುಬುರ್ಗಿ ನಗರದ ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ, ಪಿ.ವಿ.ಸ್ನೇಹ ಅವರನ್ನು ಕರ್ನಾಟಕ ಲೋಕಾಯುಕ್ತ ಎಸ್ಪಿ ಹಾಗೂ ಮಹೇಶ್ ಮೇಘಣ್ಣನವರ್ ಎಸಿಬಿ ಎಸ್ಪಿ(ಕಲಬುರ್ಗಿ) ಆಗಿ ವರ್ಗಾಯಿಸಿ ರಾಜ್ಯ ಸರಕಾರದ ಒಳಾಡಳಿತ ಇಲಾಖೆ ಉಪಕಾರ್ಯದರ್ಶಿ ಪಂಪನಗೌಡ ಮೇಲ್ಸೀಮೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News