ಪತ್ನಿಯ ಪ್ರಿಯಕರನಿಂದಲೇ ವ್ಯಕ್ತಿಯ ಕೊಲೆ

Update: 2020-08-08 12:56 GMT

ಬೆಂಗಳೂರು, ಆ.8: ಪತ್ನಿಯ ಪ್ರಿಯಕರನೇ ಪತಿಯನ್ನು ಕೊಲೆ ಮಾಡಿರುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ಬಸವನಗುಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ನಗರದ ನೆಟ್ಟಕಲ್ಲಪ್ಪ ಸರ್ಕಲ್ ಬಳಿ ನಡೆದಿದ್ದು, ಮಳವಳ್ಳಿ ಮೂಲದ ಸಿದ್ದರಾಜು ಕೊಲೆಯಾದ ವ್ಯಕ್ತಿ ಎಂದು ತಿಳಿದುಬಂದಿದೆ.

ಮೃತ ಸಿದ್ದರಾಜು ಈ ಹಿಂದೆ ತನ್ನ ಪತ್ನಿಯನ್ನು ತೊರೆದಿದ್ದ, ಬಳಿಕ ಲಕ್ಷ್ಮಣ್ ಎಂಬಾತ ಸಿದ್ದರಾಜು ಪತ್ನಿಯೊಂದಿಗೆ ಅಕ್ರಮ ಸಂಬಂಧ ಬೆಳೆಸಿದ್ದ. ಈ ವಿಚಾರ ತಿಳಿಯುತ್ತಿದ್ದಂತೆ ಸಿದ್ದರಾಜು ಗಲಾಟೆ ಮಾಡಿದ್ದ ಎನ್ನಲಾಗಿದೆ.

ಇದೇ ಕಾರಣಕ್ಕೆ ಶುಕ್ರವಾರ ರಾತ್ರಿ ಸಿದ್ದರಾಜು ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. ಈ ಸಂಬಂಧ ಬಸವನಗುಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News