ಮೋದಿಯ 'ಆತ್ಮನಿರ್ಭರ'ದ ಮುಖವಾಡ ಕಳಚಿಬಿದ್ದಿದೆ: ಸಿದ್ದರಾಮಯ್ಯ

Update: 2020-08-08 19:23 GMT

ಬೆಂಗಳೂರು, ಆ.8: ಅಖಿಲ ಭಾರತ ಕೈಮಗ್ಗ ಮಂಡಳಿಯನ್ನು ರದ್ದುಪಡಿಸಿರುವ ಕೇಂದ್ರ ಸರಕಾರದ ನಿರ್ಧಾರವನ್ನು ಖಂಡಿಸಿರುವ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಪ್ರಧಾನಿ ನರೇಂದ್ರ ಮೋದಿ ಅವರ 'ಆತ್ಮನಿರ್ಭರ'ದ ಮುಖವಾಡ ಕಳಚಿಬಿದ್ದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶನಿವಾರ ಈ ಕುರಿತು ಟ್ವೀಟ್ ಮಾಡಿರುವ ಅವರು, ಅಖಿಲ ಭಾರತ ಕೈಮಗ್ಗ ಮಂಡಳಿಯನ್ನು ರದ್ದುಪಡಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ 'ಆತ್ಮನಿರ್ಭರ'ದ ಮುಖವಾಡ ಕಳಚಿಬಿದ್ದಿದೆ ಎಂದು ತಿಳಿಸಿದ್ದಾರೆ.

ನೀತಿ ನಿರೂಪಣೆ, ಕಾರ್ಯಕ್ರಮಗಳ ಮೇಲುಸ್ತುವಾರಿ ಮತ್ತು ಕುಂದುಕೊರತೆಗಳ ನಿವಾರಣೆಯ ಕೆಲಸ ಮಾಡುತ್ತಾ, ಕೇಂದ್ರ ಸರಕಾರ ಮತ್ತು ನೇಕಾರರ ನಡುವೆ ಕೊಂಡಿಯಂತಿದ್ದ ಮಂಡಳಿ ರದ್ದತಿ ಖಂಡನೀಯ ಎಂದು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News