ಕರಾಟೆ ಚಾಂಪಿಯನ್ ನೇಣು ಬಿಗಿದು ಆತ್ಮಹತ್ಯೆ

Update: 2020-08-08 17:17 GMT

ಕಲಬುರಗಿ, ಆ.8: ನಗರದ ಗಾಜಿಪುರ ಬಡವಾಣೆಯ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬ್ರಹ್ಮಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ನಡೆದಿದೆ.

ಗಾಜಿಪುರ ನಿವಾಸಿಯಾಗಿರುವ ಸುನಿಲ್ ರೈಕೋಡ್ (38), ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಗಾಜಿಪುರ ಬಡಾವಣೆ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದ ಇವರು ಮಾನಸಿಕ ಒತ್ತಡದಿಂದ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಅನುಮಾನ ವ್ಯಕ್ತವಾಗುತ್ತಿದೆ.

ಸುನಿಲ್ ಕರಾಟೆ ಚಾಂಪಿಯನ್ ಜೊತೆ ಬ್ಲಾಕ್ ಬೆಲ್ಟ್ ಆಗಿದ್ದರು ಎಂದು ತಿಳಿದುಬಂದಿದ್ದು, ಚಪ್ಪಲಿ ಅಂಗಡಿ ಇಟ್ಟುಕೊಂಡು ವ್ಯಾಪಾರ ನಡೆಸುತ್ತಿದ್ದರು ಎನ್ನಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಸ್ಥಳಕ್ಕೆ ಬ್ರಹ್ಮಪುರ ಪೊಲೀಸರು ಭೇಟ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News