ಭಾರತವನ್ನು ತ್ಯಾಜ್ಯಮುಕ್ತಗೊಳಿಸುವ ಅಭಿಯಾನಕ್ಕೆ ಪ್ರಧಾನಿ ಮೋದಿ ಚಾಲನೆ

Update: 2020-08-08 17:49 GMT

ಹೊಸದಿಲ್ಲಿ,ಆ.8: ಭಾರತವನ್ನು ತ್ಯಾಜ್ಯಗಳಿಂದ ಮುಕ್ತಗೊಳಿಸುವ ಒಂದು ವಾರದ ಅವಧಿಯ ಅಭಿಯಾನಕ್ಕೆ ಶನಿವಾರ ಚಾಲನೆ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು,ಸ್ವಚ್ಛ ಭಾರತ ಅಭಿಯಾನವು ಕೊರೋನ ವೈರಸ್ ವಿರುದ್ಧ ಹೋರಾಟಕ್ಕೆ ಭಾರೀ ಬೆಂಬಲವನ್ನು ನೀಡುತ್ತಿದೆ ಎಂದು ಒತ್ತಿ ಹೇಳಿದರು.

ಇಲ್ಲಿ ರಾಷ್ಟ್ರೀಯ ಸ್ವಚ್ಛತಾ ಕೇಂದ್ರವನ್ನು ಉದ್ಘಾಟಿಸಿ ಮಾತನಾಡುತ್ತಿದ್ದ ಮೋದಿ,ಕೊರೋನ ವೈರಸ್ ವಿರುದ್ಧ ಮುನ್ನೆಚ್ಚರಿಕೆ ಕ್ರಮವಾಗಿ ಸುರಕ್ಷಿತ ಅಂತರವನ್ನು ಕಾಯ್ದುಕೊಳ್ಳುವಂತೆ ಮತ್ತು ಮಾಸ್ಕ್ ಧರಿಸುವಂತೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿಗಳನ್ನು ಆಗ್ರಹಿಸಿದರು. ಸ್ವಚ್ಛ ಭಾರತ ಅಭಿಯಾನ ಕುರಿತು ಸಂವಾದ ಕೇಂದ್ರವಾಗಿ ಕಾರ್ಯ ನಿರ್ವಹಿಸಲಿರುವ ರಾಷ್ಟ್ರೀಯ ಸ್ವಚ್ಛತಾ ಕೇಂದ್ರವು ಸ್ವಚ್ಛತೆಗಾಗಿ ಮಹಾತ್ಮಾ ಗಾಂಧಿಯವರ ಪ್ರಯತ್ನಗಳಿಗೆ ಸಲ್ಲಿಸಿರುವ ಗೌರವವಾಗಿದೆ ಎಂದರು.

                            

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News