ಮೈಸೂರು: ಕೋವಿಡ್ ಸೆಂಟರ್ ನಲ್ಲಿ ಅವ್ಯವಸ್ಥೆ ಆರೋಪಿಸಿ ಪ್ರತಿಭಟನೆ

Update: 2020-08-08 18:51 GMT

ಮೈಸೂರು,ಆ.8: ಕೋವಿಡ್ ಸೆಂಟರ್ ನಲ್ಲಿ ವ್ಯವಸ್ಥೆ ಸರಿಯಿಲ್ಲ ಮತ್ತು ಸೂಕ್ತ ವ್ಯವಸ್ಥೆ ಕಲ್ಪಿಸುತ್ತಿಲ್ಲ ಎಂದು ಆರೋಪಿಸಿ ಕೋವಿಡ್ ಸೆಂಟರ್ ನಲ್ಲಿ ಪ್ರತಿಭಟನೆ ನಡೆಸಲಾಯಿತು.

ನಗರದ ಹೊರವಲಯದ ಮಂಡಕಳ್ಳಿಯಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಶೈಕ್ಷಣಿಕ ಭವನದ ಕೋವಿಡ್ ಕೇರ್ ಸೆಂಟರ್ ನಲ್ಲಿ ನೂರಾರು ಕೊರೋನ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ ಕೇರ್ ಸೆಂಟರ್ ನಲ್ಲಿ ಆಡಳಿತ ವ್ಯವಸ್ಥೆಯು ಸರಿಯಾದ ಶುಚಿತ್ವ ಕಾಪಾಡುತ್ತಿಲ್ಲ ಎಂದು ಆರೋಪಿಸಿ ಪ್ರತಿಭಟಿಸಿದರು. 

ಕಸ ವಿಲೇವಾರಿ ಮಾಡುತ್ತಿಲ್ಲ, ಶೌಚಾಲಯಗಳನ್ನು ಸ್ವಚ್ಛಗೊಳಿಸುತ್ತಿಲ್ಲ, ಇದರ ಜೊತೆಗೆ ಸೊಳ್ಳೆ, ನೊಣಗಳ ಕಾಟವಿದೆ, ಬೆಡ್ ಶೀಟ್‍ಗಳನ್ನು ಬದಲಾಯಿಸುತ್ತಿಲ್ಲ, ಇದರಿಂದ ನಮಗೆ ಕೊರೋನದಿಂದ ಮುಕ್ತಿ ಸಿಗುವುದಿಲ್ಲ ಎಂದು ಆರೋಪಿಸಿದರು. ಕೋವಿಡ್ ಕೇರ್ ಸೆಂಟರ್ ನ ಮೇಲ್ವಿಚಾರಕರನ್ನು ತರಾಟೆಗೆ ತೆಗೆದುಕೊಂಡು ಆಕ್ರೋಶ ವ್ಯಕ್ತಪಡಿಸಿದರು. 

ನಮ್ಮನ್ನು ಮನೆಗೆ ಕಳುಹಿಸಿ, ನಾವೇ ಮನೆಯಲ್ಲೇ ಐಸೋಲೇಷನ್ ವ್ಯವಸ್ಥೆ ಮಾಡಿಕೊಂಡು ಅಲ್ಲೇ ಇರುತ್ತೇವೆ ಎಂದು ಒತ್ತಾಯಿಸಿದರು. ಸೋಂಕಿತರು ಸುರಕ್ಷಿತ ಅಂತರವನ್ನು ಮರೆತು ಗುಂಪು ಗುಂಪಾಗಿ ಸೇರಿಕೊಂಡು ಆಡಳಿತ ವ್ಯವಸ್ಥೆ ಹಾಗೂ ಕೊರೋಣ ವಾರಿಯರ್ ಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News