ಕೊರೋನ ಸೋಂಕಿಗೆ ಹೆದರಿ ವ್ಯಕ್ತಿ ಆತ್ಮಹತ್ಯೆ

Update: 2020-08-09 16:16 GMT

ಮೈಸೂರು,ಆ.9: ವ್ಯಕ್ತಿಯೊಬ್ಬರು ಕೊರೋನ ಸೋಂಕಿಗೆ ಹೆದರಿ ನಂಜನಗೂಡು ಕಪಿಲಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ನಂಜನಗೂಡು ಶ್ರೀರಾಮಪುರ ನಿವಾಸಿ ಮುದ್ದುಮಾದಯ್ಯ (60) ಸಾವಿಗೀಡಾದವರು. ಇವರು ರವಿವಾರ ಬೆಳಗ್ಗೆ ನಂಜನಗೂಡಿನ ಹೆಜ್ಜಿಗೆ ಸೇತುವೆಯಿಂದ ನದಿಗೆ ಹಾರಿದ್ದಾರೆ ಎಂದು ಹೇಳಲಾಗುತ್ತಿದೆ. ಇವರಿಗೆ ಇತ್ತೀಚೆಗೆ ಜ್ವರ ಬರುತಿತ್ತು. ಅವರು ಕೋವಿಡ್-19 ಪರೀಕ್ಷೆಗೆ ಒಳಪಟ್ಟಿದ್ದರು ಎನ್ನಲಾಗಿದೆ. ಈ ವರದಿ ಪಾಸಿಟಿವ್ ಬಂದಿದೆ. ಇದರಿಂದ ಹೆದರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಇವರ ಮೃತದೇಹ ಪತ್ತೆಗಾಗಿ ಅಗ್ನಿಶಾಮಕ ಸಿಬ್ಬಂದಿಗಳೊಂದಿಗೆ ಶೋಧ ಕಾರ್ಯ ನಡೆಸಲಾಗುತ್ತಿದೆ. ಈ ಸಂಬಂಧ ನಂಜನಗೂಡು ನಗರ ಪೊಲೀಸ್ ಸಬ್‍ಇನ್ಸ್‍ಪೆಕ್ಟರ್ ರವಿಕುಮಾರ್ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News