ಸರಕಾರಿ ಶಾಲೆಯ ಪೀಠೋಪಕರಣಗಳಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

Update: 2020-08-09 17:39 GMT

ಬೆಂಗಳೂರು, ಆ.9: ಸರಕಾರಿ ಶಾಲೆಗೆ ನುಗ್ಗಿರುವ ದುಷ್ಕರ್ಮಿಗಳು ಪೀಠೋಪಕರಣಗಳಿಗೆ ಬೆಂಕಿ ಹಚ್ಚಿ, ಧ್ವಂಸ ಮಾಡಿರುವ ಘಟನೆ ಬ್ಯಾಡರಹಳ್ಳಿ ಸಮೀಪದ ಹೊಸಹಳ್ಳಿಯ ಗೊಲ್ಲರಹಟ್ಟಿಯಲ್ಲಿ ನಡೆದಿದೆ.

ಕೋವಿಡ್-19 ಹಿನ್ನೆಲೆಯಲ್ಲಿ ತಾತ್ಕಲಿಕ ರಜೆ ಕಾರಣದಿಂದಾಗಗಿ ಶಾಲೆಯ ಬಹುತೇಕ ಕೊಠಡಿಗಳಿಗೆ ಸಂಪೂರ್ಣ ಬೀಗ ಹಾಕಲಾಗಿತ್ತು. ಶಿಕ್ಷಕರು ಮನೆಯಿಂದಲೇ ಕೆಲಸ ಮಾಡುತ್ತಿದ್ದರಿಂದ ಶಾಲೆ ಕಡೆ ಯಾರೂ ಸುಳಿದಾಡುತ್ತಿರಲಿಲ್ಲ. ಇದನ್ನೇ ಬಂಡವಾಳ ಮಾಡಿಕೊಂಡ ಕಿಡಿಗೇಡಿಗಳು ರಾತ್ರಿ ಶಾಲಾ ಕೊಠಡಿಯ ಹಿಂಬದಿಯಿಂದ ಕಿಟಕಿಯ ಸರಳುಗಳನ್ನು ಮುರಿದು ಒಳ ಪ್ರವೇಶಿಸಿದ್ದಾರೆ.

ಬಳಿಕ ಮೇಜು, ಕುರ್ಚಿಗಳನ್ನು ಸಂಪೂರ್ಣವಾಗಿ ಸುಟ್ಟು ಕರಕಲು ಮಾಡಿದ್ದಾರೆ.ಪಠ್ಯಕ್ಕೆ ಸಂಬಂಧಿಸಿದ ವಸ್ತುಗಳನ್ನು ಸಹ ಬೆಂಕಿಗೆ ಹಾಕಿದ್ದು, ಘಟನೆ ಸಂಬಂಧ ಶಾಲಾ ಮುಖ್ಯೋಪಾಧ್ಯಾಯರಾದ ಸೌಭಾಗ್ಯ ಎಂಬುವರು ಬ್ಯಾಡರಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News