ರಾಹುಲ್, ಪ್ರಿಯಾಂಕಾರನ್ನು ಭೇಟಿಯಾದ ಸಚಿನ್ ಪೈಲಟ್

Update: 2020-08-10 11:29 GMT

ಹೊಸದಿಲ್ಲಿ: ರಾಜಸ್ಥಾನದಲ್ಲಿ ರಾಜಕೀಯ ಬಿಕ್ಕಟ್ಟಿನ ನಡುವೆಯೇ ಸಚಿನ್ ಪೈಲಟ್ ಅವರು ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ರಾಜಸ್ಥಾನ ಬಿಕ್ಕಟ್ಟಿಗೆ ಸಂಬಂಧಿಸಿ ಎಲ್ಲಾ ಅಸಮಾಧಾನಗಳನ್ನು ಪರಿಹರಿಸಲಾಗುವುದು ಎಂದು ರಾಹುಲ್ ಗಾಂಧಿ ಭರವಸೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸುಮಾರು 2 ಗಂಟೆಗಳ ಕಾಲ ಮಾತುಕತೆ ನಡೆದಿದೆ ಎನ್ನಲಾಗಿದೆ.

ರಾಜಸ್ಥಾನದಲ್ಲಿ ಕೆಲ ದಿನಗಳಲ್ಲಿ ವಿಧಾನಸಭೆ ಅಧಿವೇಶನ ನಡೆಯಲಿದ್ದು, ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ವಿಶ್ವಾಸಮತ ಯಾಚಿಸಲಿದ್ದಾರೆ.  ಕೆಲ ದಿನಗಳ ಹಿಂದಷ್ಟೇ ಮಾತನಾಡಿದ್ದ ಅಶೋಕ್ ಗೆಹ್ಲೋಟ್  ಪಕ್ಷದ ನಾಯಕತ್ವವು ಕ್ಷಮಿಸಿದರೆ ಬಂಡಾಯ ಶಾಸಕರನ್ನು ಮತ್ತೆ ಪಕ್ಷಕ್ಕೆ ಸ್ವಾಗತಿಸುತ್ತೇನೆ ಎಂದು ಹೇಳಿದ್ದರು.

ಈ ಹಿಂದೆ ಬಂಡಾಯದ ಬೆನ್ನಲ್ಲೇ ಕಾಂಗ್ರೆಸ್ ಹೈಕಮಾಂಡ್ ಉಪಮುಖ್ಯಮಂತ್ರಿ ಸ್ಥಾನದಿಂದ ಸಚಿನ್ ಪೈಲಟ್ ರನ್ನು ವಜಾಗೊಳಿಸಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News