ಕೇರಳ ವಿಮಾನ ದುರಂತ: ಗಾಯಗೊಂಡ 56 ಪ್ರಯಾಣಿಕರು ಆಸ್ಪತ್ರೆಯಿಂದ ಬಿಡುಗಡೆ

Update: 2020-08-10 15:04 GMT

ಹೊಸದಿಲ್ಲಿ, ಆ. 10: ಕೋಯಿಕ್ಕೋಡ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಂಭವಿಸಿದ ವಿಮಾನ ದುರಂತದಲ್ಲಿ ಗಾಯಗೊಂಡು ವಿವಿಧ ಆಸ್ಪತ್ರೆಗಳಲ್ಲಿ ದಾಖಲಾಗಿದ್ದ 56 ಪ್ರಯಾಣಿಕರು ಸೋಮವಾರ ಬಿಡುಗಡೆಯಾಗಿದ್ದಾರೆ ಎಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ ಹೇಳಿದೆ.

ವಿಮಾನ ದುರಂತದಲ್ಲಿ ಗಾಯಗೊಂಡ 149 ಪ್ರಯಾಣಿಕರನ್ನು ವಿವಿಧ ಆಸ್ಪತ್ರೆಗಳಲ್ಲಿ ದಾಖಲಿಸಲಾಗಿದೆ. 23 ಮಂದಿ ಪ್ರಯಾಣಿಕರನ್ನು ಬಿಡುಗಡೆ ಮಾಡಲಾಗಿದೆ. ಮೂವರ ಸ್ಥಿತಿ ಚಿಂತಾಜನಕವಾಗಿದೆ ಎಂದು ನಾಗರಿಕ ವಾಯುಯಾನ ಸಚಿವ ಹರ್ದೀಪ್ ಸಿಂಗ್ ಪುರಿ ಶನಿವಾರ ಹೇಳಿದ್ದರು.

ಏರ್ ಇಂಡಿಯಾ ಎಕ್ಸ್‌ಪ್ರೆಸ್ ಲಿಮಿಟೆಡ್‌ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹಾಗೂ ದಕ್ಷಿಣ ವಲಯದ ಪ್ರಾದೇಶಿಕ ಮುಖ್ಯಸ್ಥ ಕೋಯಿಕ್ಕೋಡ್‌ನಲ್ಲಿ ಇದ್ದು, ಸಂತ್ರಸ್ತ ಕುಟಂಬಕ್ಕೆ ಎಲ್ಲಾ ನೆರವು ನೀಡುತ್ತಿದ್ದಾರೆ ಎಂದು ಏರ್ ಲೈನ್ಸ್ ಹೇಳಿದೆ. ವಿಮಾನ ದುರಂತದಲ್ಲಿ ಗಾಯಗೊಂಡ 56 ಮಂದಿ ಸಂಪೂರ್ಣ ಗುಣಮುಖರಾದ ಬಳಿಕ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಅದು ಹೇಳಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News