ಚಿತ್ರದುರ್ಗ ಪ್ರಥಮ ದರ್ಜೆ ಕಾಲೇಜು ಸ್ಥಳಾಂತರಕ್ಕೆ ಸಿದ್ದರಾಮಯ್ಯ ಆಕ್ರೋಶ

Update: 2020-08-10 16:57 GMT

ಬೆಂಗಳೂರು, ಆ.10: ಚಿತ್ರದುರ್ಗ ಜಿಲ್ಲೆಯ ತುರುವನೂರು ಪ್ರಥಮ ದರ್ಜೆ ಕಾಲೇಜನ್ನು, ಹಠಾತ್ತನೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿಗೆ ಸ್ಥಳಾಂತರ ಮಾಡಿರುವ ರಾಜ್ಯ ಸರಕಾರದ(ಮುಖ್ಯಮಂತ್ರಿ) ನಿರ್ಧಾರ ಖಂಡನೀಯ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾನು ಮುಖ್ಯಮಂತ್ರಿಯಾಗಿದ್ದಾಗ 2014ರಲ್ಲಿ ಸ್ಥಾಪನೆಯಾಗಿದ್ದ ಈ ಕಾಲೇಜನ್ನು ಸ್ಥಳಾಂತರಗೊಳಿಸುವುದು ಕ್ಷುಲ್ಲಕ ರಾಜಕಾರಣ ಎಂದು ಅವರು ಕಿಡಿಗಾರಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News