ದ.ಕ.: ಒಂದೇ ದಿನ 533 ಮಂದಿ ಗುಣಮುಖ, ಕೋವಿಡ್‌ಗೆ ಮತ್ತೆ ಎಂಟು ಬಲಿ

Update: 2020-08-10 17:57 GMT

ಮಂಗಳೂರು, ಆ.10: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ 146 ಕೊರೋನ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು, ಮತ್ತೆ ಎಂಟು ಮಂದಿ ಸಾವನ್ನಪ್ಪಿದ್ದಾರೆ. ಇದೇ ವೇಳೆ ಕೊರೋನ ಸೋಂಕಿನಿಂದ ಮುಕ್ತರಾದ 533 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಮಂಗಳೂರು ತಾಲೂಕಿನಲ್ಲಿ ನಾಲ್ಕು, ಬೆಳ್ತಂಗಡಿ ಒಂದು ಮತ್ತು ಇತರ ಜಿಲ್ಲೆಯ ಮೂರು ಮಂದಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ದ.ಕ. ಜಿಲ್ಲೆಯಲ್ಲಿ ಇದುವರೆಗೆ 228 ಮಂದಿ ಸಾವನ್ನಪ್ಪಿದಂತಾಗಿದೆ.

ಸೋಮವಾರ ಪತ್ತೆಯಾದ ಪಾಸಿಟಿವ್ ಪ್ರಕರಣಗಳ ಪೈಕಿ 81 ಸಾಮಾನ್ಯ ಶೀತಜ್ವರ ಪ್ರಕರಣ, ಅಂತಾರಾಷ್ಟ್ರೀಯ ಪ್ರಯಾಣ ಮಾಡಿದ ನಾಲ್ಕು ಮಂದಿ, 16 ಉಸಿರಾಟ ಸಮಸ್ಯೆಯ ಪ್ರಕರಣ ಪತ್ತೆಯಾಗಿದ್ದು, 15 ಮಂದಿಗೆ ಪ್ರಾಥಮಿಕ ಸಂಪರ್ಕದಿಂದ ಸೋಂಕು ಹರಡಿದೆ. 30 ಮಂದಿಯ ಸೋಂಕಿನ ಮೂಲವನ್ನು ಇನ್ನಷ್ಟೇ ಪತ್ತೆ ಹಚ್ಚಬೇಕಿದೆ.

ದ.ಕ.ಜಿಲ್ಲೆಯಲ್ಲಿ ಇದುವರೆಗೆ 7,353 ಕೊರೋನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಈ ಪೈಕಿ 4,215 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಸದ್ಯ ಆಸ್ಪತ್ರೆಯಲ್ಲಿ 2,910 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News