ಎಡವಟ್ಟು: ನಟ ವಿಜಯ್ ರಾಘವೇಂದ್ರರ ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ತುಂಬಿದ ಬಂಕ್ ಸಿಬ್ಬಂದಿ !

Update: 2020-08-11 08:30 GMT

ಶಿವಮೊಗ್ಗ, ಆ.11: ಜಿಲ್ಲೆಗೆ ಪ್ರವಾಸಕ್ಕೆಂದು ಕುಟುಂಬದೊಂದಿಗೆ ಬಂದಿದ್ದ ನಟ ವಿಜಯ್ ರಾಘವೇಂದ್ರ ಅವರು ಕಾರಿಗೆ ಇಂಧನ ತುಂಬಿಸಲು ಹೋದಾಗ ಬಂಕ್ ಸಿಬ್ಬಂದಿ ಪೆಟ್ರೋಲ್ ಬದಲು ಡೀಸೆಲ್ ಹಾಕಿದ ಘಟನೆ ಮಂಗಳವಾರ ನಡೆದಿದೆ.

ನಗರದ ಪ್ರತಿಷ್ಠಿತ ಪೆಟ್ರೋಲ್ ಬಂಕ್ ಒಂದರಲ್ಲಿ ಘಟನೆ ನಡೆದಿದ್ದು, ನಟ ವಿಜಯ್ ರಾಘವೇಂದ್ರ ಅವರು ಜೋಗ ನೋಡಿಕೊಂಡು ವಾಪಸ್ ಬೆಂಗಳೂರಿಗೆ ಹೋಗುವಾಗ ಈ ಎಡವಟ್ಟು ನಡೆದಿದೆ.

ನೆಚ್ಚಿನ ನಟನನ್ನು ನೋಡಿದ ಖುಷಿಯಲ್ಲಿ ಬಂಕ್ ಸಿಬ್ಬಂದಿ ಪೆಟ್ರೋಲ್ ಬದಲು ಡೀಸೆಲ್ ಹಾಕಿದ್ದಾರೆ ಎನ್ನಲಾಗಿದೆ. ನಂತರ ಎಚ್ಚೆತ್ತ ಬಂಕ್ ಸಿಬ್ಬಂದಿ ಹಾಗೂ ಮಾಲಕರು ವಿಜಯ್ ರಾಘವೇಂದ್ರ ಬಳಿ ಕ್ಷಮೆ ಯಾಚಿಸಿದರು.

ಕಾರನ್ನು ಲಾರಿಯಲ್ಲಿ ಹಾಕಿ‌ ಸರ್ವೀಸ್ ಗೆ ಕಳುಹಿಸಲಾಗಿದೆ. ವಿಜಯ್ ರಾಘವೇಂದ್ರ‌ ಹಾಗೂ ಕುಟುಂಬದವರು ಬೇರೆ ಕಾರಿನಲ್ಲಿ ಬೆಂಗಳೂರಿಗೆ ಪ್ರಯಾಣ ಮುಂದುವರಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News