ಐಎಸ್‍ಡಿಯಲ್ಲಿ ಮೊಟ್ಟ ಮೊದಲ ಬಾರಿಗೆ ಪ್ರಕರಣ ದಾಖಲು: ಭಾಸ್ಕರ್ ರಾವ್

Update: 2020-08-11 11:55 GMT

ಬೆಂಗಳೂರು, ಆ.11: ಇದೇ ಮೊದಲ ಬಾರಿಗೆ ಐಎಸ್‍ಡಿ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ ಎಂದು ನಿರ್ಗಮಿತ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ತಿಳಿಸಿದ್ದಾರೆ.

ಇತ್ತೀಚಿಗಷ್ಟೇ ಆಂತರಿಕ ಭದ್ರತಾ ವಿಭಾಗ (ಐಎಸ್‍ಡಿ) ದ ಮುಖ್ಯಸ್ಥರಾಗಿ ಅಧಿಕಾರ ಸ್ವೀಕರಿಸಿದ ಭಾಸ್ಕರ್ ರಾವ್ ಅವರು, ಈ ವಿಚಾರವನ್ನು ಟ್ವೀಟ್ ಮೂಲಕ ಅವರು ಹಂಚಿಕೊಂಡಿದ್ದಾರೆ.

ಆಂತರಿಕ ವಿಭಾಗದ ಠಾಣೆ ಶುರುವಾಗಿ ಏಳು ವರ್ಷವಾದರೂ ಯಾವುದೇ ಪ್ರಕರಣ ದಾಖಲಾಗಿರಲಿಲ್ಲ. ಇದೀಗ, ಮಾದಕ ವಸ್ತು ನಿಯಂತ್ರಣ ಕಾಯ್ದೆಯಡಿ ಪ್ರಕರಣ ದಾಖಲಿಸಿ ಆರೋಪಿಯೊಬ್ಬನನ್ನು ಬಂಧಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News