ಆಸ್ಪತ್ರೆಯಲ್ಲೇ ಕಡತ ಪರಿಶೀಲನೆ ನಡೆಸಿದ ಆರೋಗ್ಯ ಸಚಿವ ಶ್ರೀರಾಮುಲು

Update: 2020-08-11 12:08 GMT

ಬೆಂಗಳೂರು, ಆ. 11: `ಕೊರೋನ ವೈರಸ್ ಸೋಂಕಿನ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆಯಲ್ಲಿ, ಸೂಕ್ತ ಸುರಕ್ಷಿತ ಕ್ರಮಗಳ ನಡುವೆ ಕಡತಗಳ ಪರಿಶೀಲನೆಯನ್ನು ನಡೆಸಿದ್ದೇನೆ' ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಅವರು ತಿಳಿಸಿದ್ದಾರೆ.

ಮಂಗಳವಾರ ಟ್ವೀಟ್ ಮಾಡಿರುವ ಅವರು, `ಅಗತ್ಯ ಸಾರ್ವಜನಿಕ ಕೆಲಸಗಳು ನಿಲ್ಲಬಾರದೆಂಬ ದೃಷ್ಟಿಯಿಂದ ಕೆಲವು ತುರ್ತು ಕೆಲಸಗಳನ್ನು ಆಸ್ಪತ್ರೆಯಿಂದಲೇ ನಿರ್ವಹಿಸುತ್ತಿದ್ದೇನೆ. ಇದಕ್ಕೆ ಸಹಕರಿಸುತ್ತಿರುವ ಎಲ್ಲರಿಗೂ ಧನ್ಯವಾದಗಳನ್ನು ಸಲ್ಲಿಸುತ್ತೇನೆ' ಎಂದು ಹೇಳಿದ್ದಾರೆ.

ಸರಕಾರಿ ಶಾಲೆಗಳನ್ನು ದತ್ತು ತೆಗೆದುಕೊಳ್ಳುವ ಮಾದರಿ ನಡೆಗಾಗಿ ಚಿತ್ರನಟ ಕಿಚ್ಚ ಸುದೀಪ್ ಅವರನ್ನು ಸಾರ್ವಜನಿಕರ ಪರವಾಗಿ ಅಭಿನಂದಿಸುತ್ತೇನೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ಹಾಗೂ ಹಿರಿಯೂರಿನ ನಾಲ್ಕು ಶಾಲೆ ದತ್ತು ತೆಗೆದುಕೊಂಡಿದ್ದ ಅವರು ಇದೀಗ ಶಿವಮೊಗ್ಗ ಜಿಲ್ಲೆಯಲ್ಲಿ ನಾಲ್ಕು ಶಾಲೆಯನ್ನು ದತ್ತು ಪಡೆದಿದ್ದಾರೆ. ಅವರ ಈ ಆದರ್ಶ ಮತ್ತು ಅನುಕರಣೀಯ ನಡೆಗಾಗಿ ಅವರಿಗೆ ಧನ್ಯವಾದಗಳು'

-ಬಿ.ಶ್ರೀರಾಮುಲು, ಆರೋಗ್ಯ ಸಚಿವ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News