Breaking News: ಬೆಂಗಳೂರಿನ ಕಾವಲ್ ಭೈರಸಂದ್ರ ಉದ್ವಿಗ್ನ: ಗುಂಡೇಟಿಗೆ ಓರ್ವ ಬಲಿ?

Update: 2020-08-11 19:19 GMT

ಬೆಂಗಳೂರು: ಕೋಮು ಪ್ರಚೋದಕ ಪೋಸ್ಟ್ ಸಂಬಂಧ ಬೆಂಗಳೂರಿನಲ್ಲಿ ನಡೆಯುತ್ತಿರುವ ಘರ್ಷಣೆ ವಿಕೋಪಕ್ಕೆ ತಿರುಗಿದ್ದು, ಗುಂಡೇಟಿಗೆ ಒಬ್ಬರು ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಆದರೆ ಗುಂಡೇಟಿನಿಂದ ಮೃತಪಟ್ಟಿದ್ದಾರೆಯೇ ಅಥವಾ ಗಲಭೆಯಲ್ಲಿ ಮೃತಪಟ್ಟಿದ್ದಾರೆಯೇ ಎನ್ನುವುದು ಇನ್ನೂ ಖಚಿತಗೊಂಡಿಲ್ಲ.

ಕಾಡುಗೊಂಡನಹಳ್ಳಿಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.

ಅಲ್ಲದೇ, ಡಿ.ಜೆ ಹಳ್ಳಿ ವ್ಯಾಪ್ತಿಯಲ್ಲಿ ಪೊಲೀಸರ ಗುಂಡೇಟಿನಿಂದ ಮೂವರಿಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಕಿಡಿಗೇಡಿಗಳನ್ನು ಚದುರಿಸಲು ಪೊಲೀಸರು ಅಶ್ರುವಾಯು ಸಿಡಿಸಿದ್ದಾರೆ ಎಂದು ವರದಿಯಾಗಿದೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಹರಸಾಹಸಪಡುತ್ತಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News