ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದೆ: ಕಮಿಷನರ್ ಕಮಲ್ ಪಂತ್

Update: 2020-08-11 19:33 GMT

ಬೆಂಗಳೂರು: ಬೆಂಗಳೂರಿನ ಕಾವಲ್ ಭೈರಸಂದ್ರದಲ್ಲಿ ಪರಿಸ್ಥಿತಿ ಹತೋಟಿಗೆ ಬಂದಿದೆ. ಪರಿಸ್ಥಿತಿ ಹತೋಟಿಗೆ ಬಂದು ಮುಕ್ಕಾಲು ಗಂಟೆಗಳಾಗಿವೆ ಎಂದು ಬೆಂಗಳೂರು ಕಮಿಷನರ್ ಕಮಲ್ ಪಂತ್ ಹೇಳಿದ್ದಾರೆ.

ಖಾಸಗಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಕೆಲವರಿಗೆ ಗುಂಡೇಟಿನಿಂದ ಗಾಯಗಳಾಗಿವೆ. ಯಾರೂ ರಸ್ತೆಯಲ್ಲಿಲ್ಲ. ಪರಿಸ್ಥಿತಿ ವಿಕೋಪಕ್ಕೆ ಹೋಗಿದ್ದರಿಂದ ಗುಂಡಿನ ದಾಳಿ ನಡೆಸಲಾಗಿದೆ. ಪೊಲೀಸರ ಮೇಲೆ ಕಲ್ಲು, ಬಾಟಲ್ ಗಳಿಂದ ದಾಳಿ ನಡೆದಿತ್ತು. ಈಗ ಕರ್ಪ್ಯೂ ಜಾರಿ ಮಾಡಿದ್ದು, ಪರಿಸ್ಥಿತಿ ಪೊಲೀಸರ ನಿಯಂತ್ರಣದಲ್ಲಿದೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News