ಗಲಭೆ ಸಮಸ್ಯೆಗೆ ಪರಿಹಾರವಲ್ಲ, ಯಾರೂ ಕಾನೂನು ಕೈಗೆತ್ತಿಕೊಳ್ಳಬಾರದು: ಶಾಸಕ ಝಮೀರ್ ಅಹ್ಮದ್

Update: 2020-08-11 20:09 GMT

ಬೆಂಗಳೂರು: ಯಾವುದೇ ಸಮಸ್ಯೆಗೂ ಗಲಭೆ ಪರಿಹಾರವಲ್ಲ. ಕೋಮು ಪ್ರಚೋದಕ ಪೋಸ್ಟ್ ಹಾಕಿದವನಿಗೆ ಶಿಕ್ಷೆಯಾಗಬೇಕು. ಆದರೆ ದಯಮಾಡಿ ಯಾರೂ ಕಾನೂನು ಕೈಗೆತ್ತಿಕೊಳ್ಳಬಾರದು ಎಂದು ಶಾಸಕ ಝಮೀರ್ ಅಹ್ಮದ್ ಅವರು ಮನವಿ ಮಾಡಿದ್ದಾರೆ.

ಬೆಂಗಳೂರಿನ ಕಾವಲ್ ಭೈರಸಂದ್ರದ ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ಗಲಭೆ ಯಾವುದೇ ಸಮಸ್ಯೆಗೂ ಪರಿಹಾರವಲ್ಲ. ದಯಮಾಡಿ ಯಾರೂ ಕಾನೂನು ಕೈಗೆತ್ತಿಕೊಳ್ಳಬಾರದು ಎಂದ ಅವರು, ಘಟನೆ ನೂರಕ್ಕೆ ನೂರರಷ್ಟು ಹತೋಟಿಗೆ ಬಂದಿದೆ ಎಂದು ತಿಳಿಸಿದ್ದಾರೆ.

ಶಾಸಕ ರಿಝ್ವಾನ್ ಅರ್ಶದ್ ಮಾತನಾಡಿ, ಇದು ದುಃಖದ ಸಂಗತಿ. ಈ ರೀತಿಯ ಪರಿಸ್ಥಿತಿ ಆಗಬಾರದಿತ್ತು. ಇದನ್ನು ಯಾರೂ ಸಮರ್ಥನೆ ಮಾಡುತ್ತಿಲ್ಲ. ಇದು ಬಹಳ ನೋವಿನ ಸಂಗತಿ. ಮುಂದೆ ಎಂದಿಗೂ ಈ ರೀತಿಯ ಘಟನೆ ಆಗಬಾರದು ಎಂದು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News