Breaking News: ಗೋಲಿಬಾರ್ ನಲ್ಲಿ ಇಬ್ಬರು ಮೃತಪಟ್ಟಿದ್ದಾರೆ: ಗೃಹಸಚಿವ ಬಸವರಾಜ ಬೊಮ್ಮಾಯಿ

Update: 2020-08-11 20:17 GMT

ಬೆಂಗಳೂರು: ಕಾವಲ್ ಭೈರಸಂದ್ರ ಪ್ರದೇಶದಲ್ಲಿ ನಡೆದ ಗಲಭೆಗೆ ಸಂಬಂಧಿಸಿ ಮಾಹಿತಿ ನೀಡಿದ ಗೃಹಸಚಿವ ಬಸವರಾಜ ಬೊಮ್ಮಾಯಿಯವರು, ಗೋಲಿಬಾರ್ ನಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಮೂವರಿಗೆ ಗಂಭೀರ ಗಾಯಗಳಾಗಿವೆ ಎನ್ನುವ ಮಾಹಿತಿ ಲಭಿಸಿದೆ ಎಂದಿದ್ದಾರೆ.

ಖಾಸಗಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಗಲಭೆ ನಡೆದದ್ದು ಸಂಕೀರ್ಣವಾದ ಪ್ರದೇಶದಲ್ಲಿ. ಇಲ್ಲಿ ಕ್ರಿಮಿನಲ್ ಗಳಿದ್ದಾರೆ. ಒಂದು ಮೊಬೈಲ್ ಕರೆಯಿಂದ ಸಾವಿರಾರು ಜನರು ಸೇರುತ್ತಾರೆ ಎಂದರು.

ಪರಿಸ್ಥಿತಿ ಹದ್ದು ಮೀರಿದಾಗ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಗೋಲಿಬಾರ್ ನಲ್ಲಿ ಇಬ್ಬರು ಬಲಿಯಾಗಿದ್ದಾರೆ ಎನ್ನುವ ಮಾಹಿತಿ ನನಗೆ ಲಭಿಸಿದೆ ಎಂದಿದ್ದಾರೆ. ನಟೋರಿಯಸ್ ಗಳಿರುವ, ಕ್ರಿಮಿನಲ್ ಗಳಿರುವ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುತ್ತಿದೆ. ಅವರಿಗೆ ಕುಮ್ಮಕ್ಕು ನೀಡುವ ನಾಯಕರಿದ್ದು, ಅವರನ್ನು ಮಟ್ಟ ಹಾಕುತ್ತೇವೆ ಎಂದರು.

ಕಾನೂನು ಕೈಗೆತ್ತಿಕೊಂಡವರು ಎಷ್ಟೆ ದೊಡ್ಡವರಾದರೂ ಮಟ್ಟಹಾಕುತ್ತೇವೆ. ಗಲಭೆ ಸ್ಥಳಕ್ಕೆ ಹೆಚ್ಷುವರಿ ಪೊಲೀಸ್ ಪಡೆಯನ್ನು ಕಳುಹಿಸಲಾಗಿದೆ. ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳಲು ಪೊಲೀಸರಿಗೆ ಮುಕ್ತ ಅಧಿಕಾರ ನೀಡಲಾಗಿದೆ. ಕಾನೂನು ಕೈಗೆತ್ತಿಕೊಂಡವರು ಎಷ್ಟೆ ದೊಡ್ಡವರಾದರೂ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News