ಬ್ರಹ್ಮಾವರ ತಾಪಂ ನೂತನ ಅಧ್ಯಕ್ಷರಾಗಿ ಜ್ಯೋತಿ ಪೂಜಾರಿ

Update: 2020-08-12 16:49 GMT

ಬ್ರಹ್ಮಾವರ, ಆ.12: ನೂತನವಾಗಿ ರಚನೆಗೊಂಡ ಬ್ರಹ್ಮಾವರ ತಾಲೂಕು ಪಂಚಾಯತ್‌ನ ಪ್ರಥಮ ಅಧ್ಯಕ್ಷರಾಗಿ ಜ್ಯೋತಿ ಉದಯ್ ಪೂಜಾರಿ ಮತ್ತು ಉಪಾಧ್ಯಕ್ಷರಾಗಿ ಸುಧೀರ್ ಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಬ್ರಹ್ಮಾವರ ಚಾಂತಾರು ಗ್ರಾಪಂ ಕಚೇರಿಯಲ್ಲಿ ಇಂದು ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಈ ಆಯ್ಕೆ ಮಾಡಲಾಯಿತು. ಒಟ್ಟು 16 ಸದಸ್ಯ ಬಲದ ತಾಪಂನಲ್ಲಿ 13 ಬಿಜೆಪಿ ಹಾಗೂ ಮೂರು ಕಾಂಗ್ರೆಸ್ ಸದಸ್ಯರಿದ್ದಾರೆ. ಬಳಿಕ ಮಾತನಾಡಿದ ನೂತನ ಅಧ್ಯಕ್ಷೆ ಜ್ಯೋತಿ ಉದಯ್ ಪೂಜಾರಿ, ಜನರ ಸೇವೆ ಮಾಡಲು ನನಗೆ ಸಿಕ್ಕಿರುವ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಲಾಗುವುದು ಎಂದು ತಿಳಿಸಿದರು.

ಚುನಾವಣಾಧಿಕಾರಿಯಾಗಿ ಕುಂದಾಪುರ ಉಪವಿಭಾಗಾಧಿಕಾರಿ ರಾಜು ಕೆ. ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು. ತಹಶೀಲ್ದಾರ್ ಕಿರಣ್ ಗೋರಯ್ಯ, ಪಿಡಿಓ ಮಹೇಶ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News